ಟೋಕಿಯೊ (ಜಪಾನ್):ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ಇಲ್ಲಿ ಬಹು ರಾಷ್ಟ್ರೀಯ ಕಂಪನಿಗಳಾದ ಹಿಟಾಚಿ, ನಿಸಿನ್‌ಫುಡ್ಸ್‌ ಮತ್ತು ನಿಸಾನ್‌ ಮೋಟರ್‌ ಕಂಪನಿಗಳ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು.  ರಾಜ್ಯದ ಉನ್ನತ ಮಟ್ಟದ ನಿಯೋಗದ ಐದು ದಿನಗಳ ಜಪಾನ್‌ ಭೇಟಿಯ ಮೊದಲ ದಿನ ನಡೆದ ಸಭೆಗಳಲ್ಲಿ ಬಂಡವಾಳ ಹೂಡಿಕೆಯ ಸಾಧ್ಯತೆಗಳು ಮತ್ತು ರಾಜ್ಯ ಸರ್ಕಾರದ ಜೊತೆಗಿನ ಸಹಯೋಗ ವೃದ್ಧಿಸುವುದಕ್ಕೆ ಗಮನ ಕೇಂದ್ರೀಕರಿಸಲಾಗಿತ್ತು.
ಇದನ್ನೂ ಓದಿ:ನೀಟ್‌-ಯುಜಿ’ ರದ್ದುಮಾಡಿ ರಾಜ್ಯಗಳೇ ಪರೀಕ್ಷೆ ನಡೆಸಲಿ: ಸಿಎಂ ಮಮತಾ ಆಗ್ರಹ
ಹಿಟಾಚಿ ಕಂಪನಿ ಜೊತೆಗಿನ ಸಭೆಯಲ್ಲಿ, ಭವಿಷ್ಯದ ತಂತ್ರಜ್ಞಾನ, ಪರಿಸರ ಸ್ನೇಹಿ ಸುಸ್ಥಿರ ಇಂಧನ, ನಿರ್ವಹಣೆಯ ಮುನ್ಸೂಚನೆ, ಸೈಬರ್‌ ಸುರಕ್ಷತೆ ಪಾಲುದಾರಿಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು, ನಿರ್ದಿಷ್ಟವಾಗಿ ಹಣಕಾಸು ಸೇವೆಗಳಲ್ಲಿ ವಹಿವಾಟು ವಿಸ್ತರಿಸಲು ಹಿಟಾಚಿ ಕಂಪನಿಯು ಆಸಕ್ತಿ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಉದ್ಯಮ ವಿಸ್ತರಣೆ ಸಾಧ್ಯತೆಗಳ ಬಗ್ಗೆ ನಿಸಿನ್‌ ಫುಡ್ಸ್‌ ಕಂಪನಿ ಜೊತೆಗೆ ನಿಯೋಗವು ಮಾತುಕತೆ ನಡೆಸಿತು.  ʼಬೆಂಗಳೂರು ನಗರ ಕೇಂದ್ರವಾಗಿರಿಸಿ ವಹಿವಾಟು ವಿಸ್ತರಿಸಲು ವಿಪುಲ ಅವಕಾಶಗಳಿವೆ. ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಸ್ಥಾಪಿಸಲಿರುವ ಆಹಾರ ಪಾರ್ಕ್‌ಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ಬೆಂಬಲ ನೀಡಲಾಗುವುದುʼ ಎಂದು ಸಚಿವ ಪಾಟೀಲ ಅವರು ಭರವಸೆ ನೀಡಿದರು.
ಕರ್ನಾಟಕದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ತಯಾರಿಕೆ ಉಪಕ್ರಮಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆ ಮತ್ತು ವಿಸ್ತರಣೆ ಕುರಿತು ಸಚಿವರು ನಿಸಾನ್‌ ಮೋಟರ್‌ನ ಹಿರಿಯ ಉಪಾಧ್ಯಕ್ಷ  ಜೋಜಿ ತಗಾವಾ ಅವರ ಜೊತೆ ಮಾತುಕತೆ ನಡೆಸಿದರು, ನಿಸಾನ್‌ ಇಂಡಿಯಾದ ಅಧ್ಯಕ್ಷ ಫ್ರ್ಯಾಂಕ್‌ ಟೊರೆಸ್‌ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ, ಕೈಗಾರಿಕೆ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಉಪಸ್ಥಿತರಿದ್ದರು.
ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
