ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಮಂಡನೆಯಾದ “ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ” ಅಂಗೀಕಾರವಾಗಿರುವುದನ್ನು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ವಾಗತಿಸಿದ್ದಾರೆ.
ಈ ಕಾಯ್ದೆ ಅಂಗೀಕಾರಕ್ಕೆ ” ವಿಶೇಷ, ” ಆಸಕ್ತಿ ವಹಿಸಿದ ಪ್ರಧಾನ ಮಂತ್ರಿ ನರೇಂದ್ರಮೋದಿ ಹಾಗೂ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ವ್ಯಾಪಾರ ಮಾಡುವ ಸುಲಭತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ತಿದ್ದುಪಡಿ ತಂದಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಸಕಾರಾತ್ಮಕ ಬೆಳವಣಿಗೆ ಎಂದು ಹೇಳಿದ್ದಾರೆ.
ಖನಿಜ ಕ್ಷೇತ್ರದಲ್ಲಿ ನೀತಿ ಸುಧಾರಣೆಗಳು ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಗಣಿಗಾರಿಕೆ ಕೃಷಿಯ ನಂತರದ ಸ್ಥಾನದಲ್ಲಿದ್ದು, ಖನಿಜ ಸಮೃದ್ಧ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಇದು ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಾಂಪ್ರದಾಯಿಕವಾಗಿ, ಗಣಿಗಾರಿಕೆಯಲ್ಲಿ 1% ಬೆಳವಣಿಗೆಯು ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯ ದರದಲ್ಲಿ 1.2-1.4% ಹೆಚ್ಚಳಕ್ಕೆ ಕಾರಣವಾಗಿ, ನೇರ ಉದ್ಯೋಗವು 10 ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಜಿಡಿಪಿಯಲ್ಲಿ ಖನಿಜ ಕ್ಷೇತ್ರದ ಕೊಡುಗೆ ತುಂಬಾ ಕಡಿಮೆಯಾಗಿದ್ದು, (ಜಿಡಿಪಿಯ 1.75%),ನಮ್ಮ ರಾಷ್ಟ್ರೀಯ ಖನಿಜ ನೀತಿ 7 ವರ್ಷಗಳಲ್ಲಿ ಖನಿಜಗಳ ಉತ್ಪಾದನೆಯನ್ನು 200% ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.
ಭವಿಷ್ಯದಲ್ಲಿ ಇಂತಹ ಸನ್ನಿವೇಶಗಳನ್ನು ತಪ್ಪಿಸುವ ಸಲುವಾಗಿ, ಕಾಯಿದೆಯ ಸೆಕ್ಷನ್ 8 ಬಿ ಅಡಿಯಲ್ಲಿ ಅನುಮತಿಗಳು ಇತ್ಯಾದಿಗಳನ್ನು ವರ್ಗಾವಣೆ ಮಾಡುವ ಸೌಲಭ್ಯವನ್ನು ವಿಸ್ತರಿಸಿದರೆ ಹರಾಜು ಮಾಡಿದ ಗಣಿಗಳಿಂದ ಉತ್ಪಾದನೆಗೆ ಅನುಕೂಲವಾಗಲಿದೆ ಎಂದು ಸಚಿವ ನಿರಾಣಿ ಹೇಳಿದ್ದಾರೆ.
ಹಬ್ಬಗಳಿಗೆ ಬಿತ್ತು ಕರೊನಾ ಚಾಟಿ ಏಟು; ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿಷೇಧ

ಅತ್ತೆ ಮನೆಯವರನ್ನು ಭಯಾನಕ ವಿಷ ತಿನ್ನಿಸಿ ಕೊಂದ ಅಳಿಯ: ಅವನಿಗೆ ಪ್ರೇರಣೆಯಾಗಿದ್ದು ಸದ್ದಾಂ ಹುಸೇನ್​ ಅಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
