ಕಲಬುರಗಿ:ಒಬ್ಬಂಟಿಯಾಗಿ ಇರುತ್ತಿದ್ದುದಲ್ಲದೆ ಮೊಬೈಲ್​ಫೋನ್​ ಗೀಳು ಕೂಡ ಹೊಂದಿದ್ದ ಬಾಲಕನೊಬ್ಬ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಂದು ಹಾಕಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಈ ಪ್ರಕರಣ ನಡೆದಿದೆ.
ಅಪ್ರಾಪ್ತ ವಯಸ್ಸಿನವಳ ಮೇಲೆ ಅದೇ ಗ್ರಾಮದ 16 ವರ್ಷದ ಬಾಲಕ ಅತ್ಯಾಚಾರ ನಡೆಸಿ ಸಾಯಿಸಿದ್ದು, ಪ್ರಕರಣ ನಡೆದ 24 ಗಂಟೆಗಳ ಒಳಗೆ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಸದಾ ಏಕಾಂತವಾಗಿರುತ್ತಿದ್ದ ಈತ ಮೊಬೈಲ್​ಫೋನ್ ಗೀಳನ್ನು ಹೊಂದಿದ್ದು, ನಶೆಯಲ್ಲಿದ್ದಾಗ ಈ ಕೃತ್ಯವೆಸಗಿ ಪರಾರಿಯಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಹಾಗೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಮೊಂಬತ್ತಿ ಜಾಥಾ ನಡೆಸಿ ಸಂತಾಪ ಸೂಚಿಸಿದರು. ಅಲ್ಲದೆ ಅತ್ಯಾಚಾರಿಗಳನ್ನು ಬಂಧಿಸಿ, ಕಠಿಣ ಕಾನೂನುಕ್ರಮಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದರು. ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
‘ದೊಡ್ಡ’ದಾದ ಜಾತಿ-ಮೀಸಲಾತಿ ವಿವಾದ, ಐತಿಹಾಸಿಕ ದೇವಸ್ಥಾನದ ಟೆಂಡರೇ ರದ್ದು!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 5 =
Remember me
