ಮೈಸೂರು: ರೈತರ ಕಬ್ಬಿನ ಗದ್ದೆಯಲ್ಲಿ ಮರಿ ಚಿರತೆ ಪತ್ತೆಯಾಗಿದೆ. ರಕ್ಷಣೆ ಮಾಡಿದ ಮರಿ ಚಿರತೆಯನ್ನು ಗ್ರಾಮಸ್ಥರು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಕೆ.ಆರ್​.ನಗರ ತಾಲೂಕಿನ ಮಿರ್ಲೆ ಗ್ರಾಮದ ಸಂತೋಷ್​ ಎಂಬ ರೈತರ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಮರಿ ಚಿರತೆ ಕಾಣಿಸಿತು. ಕೂಡಲೇ ಅದನ್ನು ಕಾರ್ಮಿಕರು ರಕ್ಷಣೆ ಮಾಡಿದರು. ಮರಿ ಚಿರತೆ ಪತ್ತೆಯಾಗಿರುವ ಸುದ್ದಿ ಹರಡಿ ಗ್ರಾಮಸ್ಥರು ಗದ್ದೆ ಬಳಿ ಆಗಮಿಸಿ ಅದನ್ನು ಮುದ್ದಾಡಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದರು.
ಕಬ್ಬಿನ ನಡುವೆ ಕಾಡು ಹಂದಿ, ಬೆಕ್ಕು ನವಿಲು ಪತ್ತೆಯಾಗುವುದು ಸಾಮಾನ್ಯ. ಆದರೆ ಮರಿ ಚಿರತೆ ಪತ್ತೆಯಾಗಿ ಗ್ರಾಮಸ್ಥರಲ್ಲಿ ಆಶ್ಚರ್ಯ ಮೂಡಿಸಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − thirteen =
Remember me
