ಬೆಂಗಳೂರು:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಅಳವಡಿಸಿಬೇಕೆಂದು ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ ಸಿಎಂ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​​ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
ಸರ್ಕಾರ ಅರ್ಜಿ ಆಹ್ವಾನಿಸುತ್ತಿದ್ದಂತೆ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲೂ ಪ್ರವರ್ಗ-1, ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಮೀಸಲಾತಿ ನಿಯಮ ಅನ್ವಯಿಸಬೇಕೆಂಬ ಒತ್ತಾಯ ಶುರುವಾಗಿದೆ. ಹೀಗಾಗಿ ಅಸಂಖ್ಯಾತ ಆಕಾಂಕ್ಷಿಗಳ ಪರವಾಗಿ ಧ್ವನಿ ಎತ್ತಿರುವ ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ ಪತ್ರ ಬರೆದು ಸರ್ಕಾರದ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:ನಿಲ್ಲದ ರೀಲ್ಸ್​ ಸ್ಟಾರ್​ ವಿನೀತನ ಪುಂಡಾಟ: ಮೊದಲು ರೇಪ್​, ನಂತ್ರ ಸುಲಿಗೆ, ಇದೀಗ ಚಿನ್ನಾಭರಣ ಪಡೆದು ಅತ್ಯಾಚಾರ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಸಾಲಿನ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೆ.2ರವರೆಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಗಾಗಿ ಅಭ್ಯರ್ಥಿಗಳು ಪಡೆದ ಅಂಕಗಳು ಮತ್ತು ಅವರು ಪಡೆದ ಅನುಭವದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆದರೆ, ಈ ಪ್ರಕ್ರಿಯೆಯಲ್ಲಿ ಮೀಸಲಾತಿ ಅಳವಡಿಸಿರುವುದಿಲ್ಲ. ತೀರ ಹಿಂದುಳಿದ ವರ್ಗ, ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳು ಪಿಜಿ ಮುಗಿಸುವಾಗ ಸಾಮಾಜಿಕ ಮತ್ತು ಆರ್ಥಿಕ ಕಾರಣಗಳಿಂದಾಗಿ ಮೇಲ್ವರ್ಗದ ಅಭ್ಯರ್ಥಿಗಳೊಂದಿಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ಹೀಗಾಗಿ, ಅತಿಥಿ ಉಪನ್ಯಾಸಕ ನೇಮಕಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಮೀಸಲಾತಿ ಅವಕಾಶವನ್ನು ಅಳವಡಿಸಿ ತೀರಾ ಹಿಂದುಳಿದ ವರ್ಗಗಳಿಂದ ಬಂದು ಉನ್ನತ ಶಿಕ್ಷಣ ಪಡೆದ ಅಭ್ಯರ್ಥಿಗಳು ಅವಕಾಶ ವಂಚಿತರಾಗದಂತೆ ಗಮನ ಹರಿಸುವುದು ಅವಶ್ಯ ಎಂದಿದ್ದಾರೆ.

ಇದನ್ನೂ ಓದಿ:ಹಿಮಾಚಲದಲ್ಲಿ ಇಂದು ಕೂಡ ಭಾರಿ ಮಳೆ ಸಾಧ್ಯತೆ; ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ
ಈಗಾಗಲೇ 3 ವರ್ಷಗಳಿಂದ ಕೆಸೆಟ್ ಪರೀಕ್ಷೆ ನಡೆದಿರುವುದಿಲ್ಲ. 3 ವರ್ಷಗಳಿಂದ ಕೇವಲ ಪಿಜಿ ಮುಗಿಸಿದ ಅವಧಿಯಲ್ಲಿ ಅಭ್ಯರ್ಥಿಗಳು ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. 3 ವರ್ಷಗಳಲ್ಲಿ ಕೆಸೆಟ್ ಪರೀಕ್ಷೆ ಉತ್ತೀರ್ಣರಾಗದಿದ್ದರೆ ನಂತರ ಅತಿಥಿ ಉಪನ್ಯಾಸಕರಾಗಿ ಮುಂದುವರಿಯಲು ಅವಕಾಶ ಇಲ್ಲ. ಇದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. 3-4 ವರ್ಷಗಳಿಂದ ಕೆ-ಸೆಟ್ ಕರೆಯದೇ ಇರುವುದರಿಂದ ಪರೀಕ್ಷೆ ಬರೆಯಲು ಅವಕಾಶ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕ ನೇಮಕಾತಿ ಮೀಸಲಾತಿ ಅಳವಡಿಸಿ, ಕೆ-ಸೆಟ್ ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ 1 ವರ್ಷ ವಿನಾಯಿತಿ ನೀಡಿ ಈಗ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಇಂದಿರಾ ಗಾಂಧಿ ನಂತರ 40 ವರ್ಷಗಳ ಬಳಿಕ ಗ್ರೀಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − fourteen =
Remember me
