ಬೆಂಗಳೂರು:ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನವಾದ ಇಂದು ನೂರಾರು ಮುಸ್ಲಿಂ ಮುಖಂಡರನ್ನು ಸಚಿವ ಡಾ.ಸಿ.ಎನ್​. ಅಶ್ವತ್ಥನಾರಾಯಣ ಅವರು ಬಿಜೆಪಿಗೆ ಬರಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ, ಅದರಲ್ಲೂ ಮುಸ್ಲಿಂ ಸಮುದಾಯದ ಹೆಚ್ಚೆಚ್ಚು ಕಾರ್ಯಕರ್ತರು, ಮುಖಂಡರು ಬಿಜೆಪಿ ಸೇರುತ್ತಿದ್ದು, ಈ ಮೂಲಕ ಪಕ್ಷವು ಅಲ್ಪಸಂಖ್ಯಾತರ ವಿರೋಧಿ ಎಂದು ಬೊಬ್ಬೆ ಹೊಡೆಯುವ ಪ್ರತಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ ಎಂದು ಅವರು ಹೇಳಿದರು.
ನಗರದ ರಾಜಮಹಲ್‌ ಎಕ್ಸ್‌ಟೆನ್ಷನ್‌ನ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಾದ ಆರ್.‌ಗೀತಾಂಜಲಿ, ಆರ್.‌ವೇಣುಕುಮಾರ್‌ ಹಾಗೂ ಶಕೀಲ್‌ ಅಹಮದ್‌ ಮತ್ತವರ ನೂರಾರು ಬೆಂಬಲಿಗರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ. ಸಹಬಾಳ್ವೆ, ಸೌಹಾರ್ದತೆಯನ್ನು ನಂಬಿರುವ ಪಕ್ಷ. ವಿನಾಕಾರಣ ಪಕ್ಷದ ವಿರುದ್ಧ ಹುಯಿಲೆಬ್ಬಿಸುವ ಕಾಂಗ್ರೆಸ್‌ ಮತ್ತು ಜೆಡಿಎಸ್​​ಗೆ ಈ ಮೂಲಕ ಬಿಜೆಪಿ ಏನೆಂಬುದು ಗೊತ್ತಾಗಲಿದೆ ಎಂದರು.

ಪಕ್ಷಕ್ಕೆ ಇಷ್ಟು ಪ್ರಮುಖರು, ಮುಖಂಡರು, ಕಾರ್ಯಕರ್ತರು ಸೇರ್ಪಡೆ ಆರುವುದು ಸಂತಸ ಉಂಟು ಮಾಡಿದೆ. ಎಲ್ಲರೂ ಪಕ್ಷವನ್ನು ಕಟ್ಟಲಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರಲು ಇವರೆಲ್ಲರೂ ಶ್ರಮಿಸಲಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನವೇ ಮುಸ್ಲಿಂ ಸಮುದಾಯದವರು ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಸೇರಿರುವುದು ನನಗೆ ಅಪಾರ ಸಂತೋಷ ಉಂಟು ಮಾಡಿದೆ. ರಾಜ್ಯದ ಮುಂದಿನ ರಾಜಕೀಯಕ್ಕೆ ಇದು ಸ್ಪಷ್ಟ ದಿಕ್ಸೂಚಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿ ಮುಖಂಡರಾದ ಕೇಶವಮೂರ್ತಿ ಮತ್ತಿತರರು ಇದ್ದರು.
ಒಟಿಟಿಯಲ್ಲಿ ಬರಲಿದೆ ಪದ್ಮಶ್ರೀ ಪುರಸ್ಕೃತ ನಟಿ ಭಾರತಿ ವಿಷ್ಣುವರ್ಧನ್​ ಅವರ ‘ಬಾಳೆ ಬಂಗಾರ’

ಗಂಗಾನದಿಯಲ್ಲೊಂದು ಭಾರಿ ಶಾಕ್​; 30ಕ್ಕೂ ಅಧಿಕ ಮಂದಿಗೆ ಗಾಯ, ಸುಮಾರು 20 ಜನ ನಾಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
