ಬೆಂಗಳೂರು:ಒಂದು ಸಾಧಾರಣ ಮಳೆ ಬಂದರೂ ಅತಿಬೇಗ ತೊಂದರೆಗೆ ಒಳಗಾಗುವುದೆಂದರೆ ರಾಜ್ಯದ ರಾಜಧಾನಿ. ಒಂದೆರಡು ಗಂಟೆ ಭಾರಿ ಮಳೆ ಸುರಿಯಲಾರಂಭಿಸಿದರೆ ಕೆಲವೇ ನಿಮಿಷಗಳಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುತ್ತದೆ. ಅಂಥದ್ದರಲ್ಲಿ ಗಂಟೆಗಟ್ಟಲೆ ಒಂದಕ್ಕಿಂತ ಹೆಚ್ಚು ದಿನ ಭಾರಿ ಮಳೆ ಸುರಿದರೆ ಹೇಗಿರಬೇಡ ಎಂಬುದಕ್ಕೆ ಈ ವಾರದಲ್ಲಿ ಸುರಿದ ಮಳೆಯೇ ಸಾಕ್ಷಿ.
ಹೀಗೆ ಇತ್ತೀಚಿಗಷ್ಟೇ ಸಿಲಿಕಾನ್ ಸಿಟಿಯಲ್ಲಿ ಬಿದ್ದ ಭಾರಿ ಮಳೆಯಿಂದ ಹಾನಿಗೊಳಗಾದ ಮನೆಗಳ ಸಂಖ್ಯೆಯೇನೂ ಕಡಿಮೆ ಇಲ್ಲ. ರಾಜಧಾನಿಯಲ್ಲಿ ಸುರಿದಿರುವ ಭಾರಿ ಮಳೆಯಿಂದ ನಗರದ ಸಾವಿರಾರು ಮನೆಗಳು ಹಾನಿಗೀಡಾದ ಬಗ್ಗೆ ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಬಿ.ಶರತ್ ಮಾಹಿತಿ ನೀಡಿದ್ದಾರೆ.
ಬಿಬಿಎಂಪಿಯ ಪೂರ್ವ ವಲಯದಲ್ಲಿ 714, ದಕ್ಷಿಣ-652, ಆರ್.ಆರ್.ನಗರ-530, ಪಶ್ಚಿಮ-494, ಮಹದೇವಪುರ-461, ದಾಸರಹಳ್ಳಿ-247, ಯಲಹಂಕ-208 ಮತ್ತು ಬೊಮ್ಮನಹಳ್ಳಿ ವಲಯದ 147 ಸೇರಿ ಒಟ್ಟು 3,453 ಮನೆಗಳಿಗೆ ಹಾನಿಯಾಗಿರುವುದು ಸರ್ವೇಯಲ್ಲಿ ದೃಢಪಟ್ಟಿದೆ. ಹಾಗಾಗಿ, ವಿವರಗಳನ್ನು ಸಂಗ್ರಹಿಸಿ ಸಂತ್ರಸ್ತರಿಗೆ ತಲಾ 25 ಸಾವಿರ ರೂ. ಪರಿಹಾರ ನೀಡುವ ಕಾರ್ಯ ಈಗಾಗಲೇ ಶುರುವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾಹಿತಿ ನೀಡಿದರು.
ಕಡಿಮೆ ಅವಧಿಯಲ್ಲಿ ಬಿದ್ದಿರುವ ಭಾರಿ ಮಳೆಯಿಂದ ನಗರದಲ್ಲಿ ಸಮಸ್ಯೆ ಆಗುತ್ತಿರುವುದು ನಿಜ. ಸಿಲಿಕಾನ್ ಸಿಟಿಯಲ್ಲಿ 984 ಕಿ.ಮೀ. ರಾಜಕಾಲುವೆಗಳಿವೆ. ರಾಜಕಾಲುವೆಯಲ್ಲಿ ಹೂಳು ತೆಗೆಯಲು ಖಾಸಗಿ ಸಂಸ್ಥೆಗೆ ವಹಿಸಲಾಗಿದೆ. ಜಲಮಂಡಳಿಯವರು ರಾಜಕಾಲುವೆಯಲ್ಲಿ ಪೈಪ್ ಅಳವಡಿಕೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಮಸ್ಯೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ಹರಿಯುತ್ತಿರುವ ನೀರನ್ನು ಬೇರೆ ಕಡೆಗೆ ಹರಿಯುವಂತೆ ವ್ಯವಸ್ಥೆ ಮಾಡುತ್ತೇವೆ ಎಂದರು.
ಅರಣ್ಯ, ನೀರು ನುಗ್ಗಿರುವುದು, ವಿದ್ಯುತ್ ಮತ್ತು ಆಪ್ಟಿಕಲ್ ಫೈಬರ್ ಸೇರಿ ಇತರೆ ಸಮಸ್ಯೆಗಳ ಬಗ್ಗೆ ಒಟ್ಟು 106 ದೂರುಗಳು ಬಿಬಿಎಂಪಿ ವ್ಯಾಪ್ತಿಯ ಕಂಟ್ರೋಲ್ ಕೊಠಡಿಗೆ ಬಂದಿವೆ. ದಾಖಲಾದ ದೂರುಗಳು ಪೈಕಿ 96 ಬಾಕಿ ಉಳಿದಿವೆ. 12ರಿಂದ 14 ವರ್ಷದವರೆಗೆ, 15ರಿಂದ 17 ವರ್ಷದವರೆಗೆ ಹಾಗೂ 18 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ವಾಕ್ಸಿನೇಷನ್ ನೀಡಲಾಗುತ್ತಿದೆ. 12ರಿಂದ 14 ವರ್ಷದವರೆಗೆ ಶೇ.64 ಮೊದಲನೇ ಡೋಸ್ ಪಡೆದಿದ್ದಾರೆ. ಇದರಲ್ಲಿ ಶೇ.16 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. 15ರಿಂದ 17 ವರ್ಷವರೆದವರಿಗೆ ಶೇ.77 ಮೊದಲನೆ ಡೋಸ್ ನೀಡಲಾಗಿದೆ. ಇದರಲ್ಲಿ ಶೇ.64 ಮಂದಿ 2ನೇ ಡೋಸ್ ಪಡೆದಿದ್ದಾರೆ. 18 ವರ್ಷ ಮೇಲ್ಪಟ್ಟನವರು ಶೇ.91 ಮೊದಲನೆ ಡೋಸ್ ಹಾಕಿಸಿಕೊಂಡಿದ್ದಾರೆ. ಇದರಲ್ಲಿ ಶೇ.95 ಮಂದಿ 2ನೇ ಡೋಸ್ ಪಡೆದಿದ್ದಾರೆ ಎಂದು ವಿಶೇಷ ಆಯುಕ್ತರು ಹೇಳಿದ್ದಾರೆ.
ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಧಗಧಗನೆ ಹೊತ್ತಿ ಉರಿಯಿತು ನಾಲ್ವರಿದ್ದ ಕಾರು: ದೇವಸ್ಥಾನದಿಂದ ಮರಳುವಾಗ ಅವಘಡ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
