ಬೀದರ್:ಭಾರಿ ಮಳೆ ಸಂದರ್ಭದಲ್ಲಿ ಅವಘಡಗಳು ಸಂಭವಿಸುವುದು ಸರ್ವೇಸಾಮಾನ್ಯ. ಅಂಥದ್ದೇ ಒಂದು ಪ್ರಕರಣ ಬೀದರ್ ಜಿಲ್ಲೆಯಲ್ಲಿ ನಡೆದಿದ್ದು, ತಾಯಿಯ ಜೊತೆಗೆ ಇಬ್ಬರು ಮಕ್ಕಳೂ ನೀರುಪಾಲಾಗಿದ್ದಾರೆ. ಇವರು ಹಳ್ಳ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸುನಂದಾ ಸಂಗಪ್ಪಾ ಲದ್ದೆ (42), ಅವರ ಮಗ ಸುಮಿತ್ (12), ಮಗಳು ಐಶ್ವರ್ಯ ಲದ್ದೆ (14) ಸಾವಿಗೀಡಾದವರು. ಇವರು ಹೊಲದಲ್ಲಿ ಕೆಲಸ ಮಾಡಿ ಮನೆಗೆ ಮರಳುವಾಗ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ:86 ವರ್ಷದ ಮಹಿಳೆಗೆ ಕೊನೆಗೂ ಪತಿ ಸತ್ತ 49 ವರ್ಷಗಳ ಬಳಿಕ ಪಿಂಚಣಿ!
ಭಾರಿ ಬಿರುಗಾಳಿ ಜೊತೆ ಸುರಿದ ಅಕಾಲಿಕ ಮಳೆಯಿಂದ ಇಲ್ಲಿನ ಹೆಡಗಾಪುರ ಹಳ್ಳ ತುಂಬಿ ಹರಿಯುತ್ತಿತ್ತು. ಅದಾಗ್ಯೂ ಮನೆಗೆ ತಲುಪುವ ಭರದಲ್ಲಿ ಅವರು ಈ ಹಳ್ಳ ದಾಟಲು ಮುಂದಾಗಿದ್ದರು. ಸಂಗಪ್ಪ ಅವರು ಮೊದಲು ಹಳ್ಳ ದಾಟಿದ್ದು, ಬಳಿಕ ಹಳ್ಳ ದಾಟಲು ಯತ್ನಿಸಿದ್ದ ಅವರ ಪತ್ನಿ ಮತ್ತು ಇಬ್ಬರು ಮಕ್ಕಳೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಇದನ್ನೂ ಓದಿ:ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ‌ ದಳದ ಸಿಬ್ಬಂದಿ ಶವಗಳ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.
ಗರ್ಭವತಿಯರ ಪತ್ತೆಗಾಗಿ ಶಾಲಾ ಮಕ್ಕಳಿಗೂ ಋತುಮತಿ ಕಾರ್ಡ್!

ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × two =
Remember me
