ಬೆಂಗಳೂರು: ಎಸ್​ಡಿಪಿಐ, ಕೆಎಫ್​ಡಿ ಹಾಗೂ ಪಿಎಫ್​ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.
ತಮ್ಮ ಹತ್ಯೆಗೆ ಸಂಚು ರೂಪಿಸಿದ ವಿಷಯ ತಿಳಿಯುತ್ತಿದ್ದಂತೆ ಅವರು ಈ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದರಿಂದ ಅವುಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಈ ಮೂರು ಸಂಘಟನೆಗಳ ವಿರುದ್ಧ 1,500 ಕೇಸುಗಳು ಇವೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಹಲವು ಕೇಸ್​ಗಳನ್ನು ಹಿಂದಕ್ಕೆ ಪಡೆದರು. ಹೀಗಾಗಿ ಈ ಸಂಘಟನೆಗಳು ಮತ್ತೆ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿವೆ ಎಂದು ಆರೋಪಿಸಿದರು.
ಈ ಸಂಘಟನೆಗಳಿಗೆ ನೆರೆ ರಾಷ್ಟ್ರಗಳಾದ ಬಾಂಗ್ಲಾ ಹಾಗೂ ಪಾಕಿಸ್ತಾನದಿಂದ ಹಣ ಹರಿದು ಬರುತ್ತಿದೆ. ಕೆಎಫ್​ಡಿ ಸಂಘಟನೆ ಸದ್ಯ ಅಸ್ತಿತ್ವದಲ್ಲಿ ಇಲ್ಲ. ಆ ಸಂಘಟನೆ ಪಿಎಫ್​ಐನೊಂದಿಗೆ ವಿಲೀನಗೊಂಡಿದೆ. (ದಿಗ್ವಿಜಯ ನ್ಯೂಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
