ಬೆಂಗಳೂರು:ಪುಟ್ಟೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಖತರ್ನಾಕ್​ ಮಾಡೆಲ್​ ಒಬ್ಬಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತಳನ್ನು ನೇಹಾ ಅಲಿಯಾಸ್​ ಮೆಹರ್ ಎಂದು ಗುರುತಿಸಲಾಗಿದೆ. ಈಕೆಯನ್ನು ಮುಂಬೈನಲ್ಲಿ ಬಂಧಿಸಿದ ಪುಟ್ಟೇನಹಳ್ಳಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಆರೋಪಿಗಳಾದ ಶರಣ ಪ್ರಕಾಶ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವರನ್ನು ಬಂಧಿಸಲಾಗಿದೆ. ಹನಿಟ್ರ್ಯಾಪ್​ ಜಾಲಕ್ಕೆ ಕೆಡವಲು ಆರೋಪಿಗಳು ‘ಕತ್ನಾ’ ಅಸ್ತ್ರ ಪ್ರಯೋಗ ಮಾಡುತ್ತಿದ್ದರು. ಬಾಂಬೆ ಮಾಡೆಲ್ ಇಟ್ಟುಕೊಂಡು ಆರೋಪಿಗಳು ಮಿಕಾಗಳಿಗೆ ಬಲೆ ಬೀಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಕುಡಿದರೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಹತ್ವದ ಮಾಹಿತಿ….

ಈ ನೇಹಾ, ಟೆಲಿಗ್ರಾಮ್ ಮೂಲಕ ಕೆಲವರನ್ನು ಸಂಪರ್ಕ ಮಾಡುತ್ತಿದ್ದಳು. ಬಳಿಕ ಬಣ್ಣದ ಮಾತುಗಳಿಂದ ಮರಳು ಮಾಡುತ್ತಿದ್ದಳು. ನೋಡಲು ಸುಂದರವಾಗಿರುವುದರಿಂದ ಕೆಲವರು ಆಕೆಯ ಬಲೆಗೆ ಬಿದ್ದಿದ್ದಾರೆ. ಲೈಂಗಿಕ ಕ್ರಿಯೆಗೆ ಅಂತ ಮನೆಯೊಂದಕ್ಕೆ ಕರೆಸಿಕೊಳ್ಳುತ್ತಿದ್ದಳು. ಆಕೆಯ ಮಾತು ನಂಬಿ ಸಂತ್ರಸ್ತರು ಜೆಪಿ ನಗರದ ಐದನೇ ಹಂತದಲ್ಲಿರುವ ಮನೆಗೆ ಬರುತ್ತಿದ್ದರು. ಮನೆಯ ಬೆಲ್ ಮಾಡುತ್ತಿದ್ದಂತೆ ಈ ಸುಂದರಿ ಬಿಕಿನಿಯಲ್ಲಿ ಸ್ವಾಗತ ಕೋರುತ್ತಿದ್ದಳು.
ಬಿಕಿನಿಯಲ್ಲೇ ಸಂತ್ರಸ್ತರನ್ನು ಒಮ್ಮೆ ತಬ್ಬಿಕೊಂದು ಮನೆಗೆ ಸ್ವಾತಿಸುತ್ತಿದ್ದಳು. ಬಳಿಕ ಆಕೆಯೊಂದಿಗೆ ನಡೆಯುತ್ತಿದ್ದ ರಂಗಿನಾಟದ ಹಸಿ ಬಿಸಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗುತ್ತಿತ್ತು. ಸಂತ್ರಸ್ತರು ಎಂಟ್ರಿಯಾದ ಮೂರೆ ನಿಮಿಷಕ್ಕೆ ಉಳಿದ ಆರೋಪಿಗಳು ಅಲ್ಲಿಗೆ ಬರುತ್ತಿದ್ದರು. ಬಳಿಕ ಮೊಬೈಲ್​ನಲ್ಲೂ ರೆಕಾರ್ಡ್​ ಮಾಡಿಕೊಳ್ಳುತ್ತಿದ್ದರು. ಇದೆಲ್ಲ ಮಾಡುವುದಕ್ಕೂ ಮುನ್ನ ಸಂತ್ರಸ್ತರಿಂದ ಮೊಬೈಲ್​ ಕಸಿದುಕೊಳ್ಳುತ್ತಿದ್ದರು. ಮೊಬೈಲ್​ನಲ್ಲಿರುವ ಎಲ್ಲ ನಂಬರ್ ಅನ್ನು ನೋಟ್ ಮಾಡಿಕೊಳ್ತಿದ್ದರು.
ಇಷ್ಟೆಲ್ಲಾ ಆದ ಬಳಿಕ ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಹಣ ಕೊಡದಿದ್ದರೆ ವಿಡಿಯೋವನ್ನು ಸ್ನೇಹಿತರು, ಸಂಬಂಧಿಕರು ಹಾಗೂ ಕುಟುಂಬಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ಅಲ್ಲದೇ ಯುವತಿ ಮುಸ್ಲಿಂ ಆಗಿದ್ದಾಳೆ. ಆಕೆಯನ್ನು ಮದುವೆ ಆಗುವಂತೆ ಡ್ರಾಮಾ ಮಾಡುತ್ತಿದ್ದರು. ಮದುವೆ ಆಗಬೇಕಾದರೆ ಕತ್ನಾ ಮಾಡಿಸಬೇಕು ಎಂದು ಧಮ್ಕಿ ಹಾಕಿ, ಮುಸ್ಲಿಂ ಆಗಿ ಕನ್ವರ್ಟ್ ಆಗುವಂತೆ ಬೆದರಿಕೆ ಹಾಕುತ್ತಿದ್ದರು.
ಇದನ್ನೂ ಓದಿ:ಆರ್​ಟಿಒ ಕಚೇರಿಗಳಲ್ಲಿ ಖಾಸಗಿ ದರ್ಬಾರ್!; ಬೆಂಗಳೂರು, ಮೈಸೂರು, ದಾವಣಗೆರೆಯಲ್ಲಿ ಎಫ್​ಐಆರ್​
ಇದರಿಂದ ಹೆದರಿ ಹಣ ವರ್ಗಾವಣೆ ಮಾಡಿದ ಸಂತ್ರಸ್ತ ಬಳಿಕ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಸದ್ಯಕ್ಕೆ ಬಂಧಿಸಲಾಗಿದೆ. ಇದೇ ರೀತಿ 12 ಕ್ಕೂ ಹೆಚ್ಚು ಜನರಿಗೆ ಹನಿಟ್ರ್ಯಾಪ್ ಮಾಡಿರೋದು ಬೆಳಕಿಗೆ ಬಂದಿದೆ. ಒಟ್ಟು 30 ಲಕ್ಷಕ್ಕೂ ಹೆಚ್ಚು ಹಣ ವರ್ಗಾಯಿಸಿಕೊಂಡಿರುವುದಾಗಿ ತಿಳಿದುಬಂದಿದ್ದು, ಪುಟ್ಟೇನಹಳ್ಳಿ ಪೊಲೀಸರಿಂದ ಮುಂದುವರೆದ ತನಿಖೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಸಿಕ್ಕಾಪಟ್ಟೆ ಟ್ರೋಲ್​ ಆಗ್ತಿದೆ ಸಮಂತಾ-ವಿಜಯ್​ ಹಾಟ್​ ಡಾನ್ಸ್ ವಿಡಿಯೋ​: ನೆಟ್ಟಿಗರು ಹೇಳಿದ್ದಿಷ್ಟು….

ತಮಿಳುನಾಡು ಪಿರಿಪಿರಿ: ಸರ್ಕಾರಕ್ಕೆ ಉಭಯಸಂಕಟ; ಐಎನ್​ಡಿಐಎ ಮಿತ್ರ ಡಿಎಂಕೆ ಪಟ್ಟು ಕಾಂಗ್ರೆಸ್​ಗೆ ಇಕ್ಕಟ್ಟು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + eight =
Remember me
