ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್​ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.
ಗೋ ಸಾಗಾಟ ಕುರಿತ ನಿಯಮಗಳ ಸೂಚನೆ ನೀಡಿದ್ದ ಜಿಲ್ಲಾಧಿಕಾರಿಯನ್ನು “ಫಸ್ಟ್​ ಮೊಲೆನ್​ ಕರ್ತ್​ ಕೆರೊಡು'(ಮೊದಲು ಅವಳನ್ನು ಕಡಿದು ಕೊಲ್ಲಬೇಕು) ಎಂದು ತುಳುವಿನಲ್ಲಿ ಬೆದರಿಕೆ ಹಾಕಲಾಗಿದೆ. ಇದರ ಬೆನ್ನಲ್ಲೇ ಸಿಂಧೂ ಬಿ.ರೂಪೇಶ್​ ಸೇರಿದಂತೆ 13 ಹಿರಿಯ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿರಿಸುದ್ದಿಗಾಗಿ ಕೊಲೆ ಆರೋಪಿ ಮನೆಗೆ ಬೆಂಕಿ ಹಚ್ಚಿಸಿದ್ದ ವರದಿಗಾರ ಅರೆಸ್ಟ್!
ಬಕ್ರೀದ್​ ಹಬ್ಬದ ಸಂದರ್ಭ ಅಕ್ರಮವಾಗಿ ಗೋ ಸಾಗಾಟ ಆಗದಂತೆ ತಡೆಯಬೇಕು. ಆದರೆ, ಗೋ ಸಾಗಾಟ ತಡೆ ವೇಳೆ ಯಾರೂ ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ದೂರು ನೀಡಬೇಕು ಎಂದು ಡಿಸಿ ಸಿಂಧು ಬಿ. ರೂಪೇಶ್​ ಸೋಮವಾರ ಮಾಧ್ಯಮ ಹೇಳಿಕೆ ನೀಡಿದ್ದರು. ಅದನ್ನು ಕೆಲ ವೆಬ್​ಸೈಟ್​ಗಳಲ್ಲಿ ಅಪಾರ್ಥ ಬರುವ ರೀತಿಯಲ್ಲಿ ಪ್ರಕಟಿಸಲಾಗಿತ್ತು. ಅದನ್ನೇ ಉಲ್ಲೇಖಿಸಿ ಸಂಘಟನೆಯೊಂದರ ವಾಟ್ಸ್ಆ್ಯಪ್​ ಗ್ರೂಪ್​ನಲ್ಲಿ ವ್ಯಕ್ತಿಯೊಬ್ಬ “ಫಸ್ಟ್​ ಮೊಲೆನ್​ ಕರ್ತ್​ ಕೆರೊಡು'(ಮೊದಲು ಅವಳನ್ನು ಕಡಿದು ಕೊಲ್ಲಬೇಕು) ಎಂದು ತುಳುವಿನಲ್ಲಿ ಬೆದರಿಕೆ ಹಾಕಿದ್ದ. ಪೊಲೀಸ್​ ಇಲಾಖೆ ತನಿಖೆ ಆರಂಭಿಸಿದೆ.
ಈ ಬಗ್ಗೆ ‘ವಿಜಯವಾಣಿ’ಗೆ ಮಾಹಿತಿ ನೀಡಿರುವ ಡಿಸಿಪಿ ಅರುಣಾಂಗ್ಶುಗಿರಿ ಅವರು ಜಿಲ್ಲಾಧಿಕಾರಿ ಈವರೆಗೆ ದೂರು ನೀಡಿಲ್ಲ. ಅವರಿಗೆ ದೂರು ನೀಡುವಂತೆ ತಿಳಿಸಿದ್ದೇವೆ. ನಾವು ಸ್ವಯಂಪ್ರೇರಣೆಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.
ಈ ನಡುವೆಯೇ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜಕುಮಾರ್​ ಕತ್ರಿ, ನಾಗಾಂಬಿಕ ದೇವಿ ಸೇರಿ 13 ಹಿರಿಯ ಐಎಎಸ್​ ಅಧಿಕಾರಿಗಳಿಗೆ ಸರ್ಕಾರ ಮಂಗಳವಾರ ವಿವಿಧ ಜವಾಬ್ದಾರಿ ನೀಡಿ ಸ್ಥಳ ನಿಯುಕ್ತಿಗೊಳಿಸಿದೆ. ಸಿಂಧೂ ಬಿ ರೂಪೇಶ್​ ಅವರನ್ನು-ಎಲೆಕ್ಟ್ರಾನಿಕ್​ ಡೆಲಿವರಿ ಆಫ್​ ಸಿಟಿಜನ್​ ಸವಿರ್ಸ್​ (ಡಿಪಿಎಆರ್​) ನಿರ್ದೇಶಕರ ಸ್ಥಾನಕ್ಕೆ ನಿಯುಕ್ತಿ ಮಾಡಲಾಗಿದೆ.
ಎಮ್ಮೆಗಳ ಕಾದಾಟ, ಬಾವಿಗೆ ಜಿಗಿದ ಗರ್ಭಿಣಿ ಎಮ್ಮೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
