ಚಿತ್ರದುರ್ಗ:ಇಲ್ಲಿನ ಮುರುಘಾ ಮಠದ ರಾಜಾಂಗಣದಲ್ಲಿದ್ದ 47 ಫೋಟೊಗಳು ಕಳವಾಗಿರುವುದು ಶುಕ್ರವಾರ ಬೆಳಕಿಗೆ ಬಂದಿದೆ. ಶ್ರೀಮಠದ ಪೀಠಾಧಿಪತಿ ಅವರೊಂದಿಗೆ ಹಲವು ಗಣ್ಯರು ಇರುವ ಹಾಗೂ ಶ್ರೀಮಠದಿಂದ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಮಾರಂಭಗಳ ಛಾಯಾಚಿತ್ರಗಳನ್ನು ರಾಜಾಂಗಣದೊಳಗೆ ಅಳವಡಿಸಲಾಗಿತ್ತು.
ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಗುರುವಾರ ಶೂನ್ಯ ಪೀಠಾರೋಹಣ ಹಾಗೂ ಬಸವಣ್ಣ, ಅಲ್ಲಮಪ್ರಭು ದೇವರ ಭಾವಚಿತ್ರಗಳ ಮತ್ತು ವಚನ ಹಸ್ತಪ್ರತಿಗಳ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ವೇಳೆ ಈ ಫೋಟೋಗಳು ಇಲ್ಲದಿರುವುದು ಗಮನಕ್ಕೆ ಬಂದಿದೆ.
ಬುಧವಾರ ರಾತ್ರಿ ಅಥವಾ ಗುರುವಾರ ನಸುಕಿನಲ್ಲಿ ಕಳ್ಳತನ ನಡೆದಿದೆ. ಫೋಟೋಗಳನ್ನು ಸಾಗಿಸುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ.
ಕಳವು ಪ್ರಕರಣ ಕುರಿತಂತೆ ಎಸ್‌ಜೆಎಂ ಕಾರ್ಯದರ್ಶಿ ಎಸ್.ಬಿ. ವಸ್ತ್ರಮಠ ಗ್ರಾಮಾಂತರ ಠಾಣೆಗೆ ಶುಕ್ರವಾರ ಸಂಜೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​ಪಿ ಪರಶುರಾಮ್ ತಿಳಿಸಿದ್ದಾರೆ.
ಮತ್ತೆ ಟಿಪ್ಪು ಪರ ನಿಂತ ಸಿದ್ದರಾಮಯ್ಯ; ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ ಕಾರಲು ಕಾರಣವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
