ಹಾವೇರಿ:ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತಂತೆ ಐತಿಹಾಸಿಕ ಮೈಲಾರಲಿಂಗೇಶ್ವರ ನುಡಿದಿದ್ದ ಭವಿಷ್ಯವಾಣಿಯು ಇಂದು ನಿಜವಾಗಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಕಾರ್ಣಿಕೋತ್ಸವ ಜರುಗಿತ್ತು. 14 ಅಡಿ ಎತ್ತರದ ಬಿಲ್ಲನ್ನೇರಿ ವರ್ಷದ ಕಾರ್ಣಿಕ ಭವಿಷ್ಯವನ್ನು ಗೊರವಯ್ಯ ರಾಮಪ್ಪ ನುಡಿದಿದ್ದರು.
ಅಂಬಲಿ ಹಳಸೀತು ಕಂಬಳಿ ಬೀಸೀತಲೇ ಪರಾಕ್ ಎನ್ನುವ ಭವಿಷ್ಯವಾಣಿಯನ್ನು ಗೊರವಯ್ಯ ರಾಮಪ್ಪ ನುಡಿದಿದ್ದರು. ಪ್ರಾಮಾಣಿಕವಾಗಿ, ನಿಷ್ಠಯಿಂದ ಇರುವ ವ್ಯಕ್ತಿ ರಾಜ್ಯ ಹಾಗೂ ರಾಷ್ಟ್ರವನ್ನು ಆಳುತ್ತಾನೆ ಎಂದು ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಲಾಗಿತ್ತು.
ಇದನ್ನೂ ಓದಿ:ಭಾರತದಲ್ಲಿ ಬಹುತೇಕ ತಗ್ಗಿದ ಕೋವಿಡ್: ಆರೋಗ್ಯ ತುರ್ತಸ್ಥಿತಿ ಅಂತ್ಯ, ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ನಿಷ್ಠೆಯಿಂದಿರುವ ನಾಯಕರಿಗೆ ರಾಜ್ಯದ ಪಟ್ಟ ಎಂದು ಹೇಳಲಾಗಿತ್ತು. ಪರೋಕ್ಷವಾಗಿ ಕುರಬ ಸಮುದಾಯದ ವ್ಯಕ್ತಿಯೇ ರಾಜ್ಯವನ್ನಾಳುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಆ ಭವಿಷ್ಯ ನಿಜವಾಗುತ್ತಿದೆ ಎಂದು ಹೇಳಲಾಗಿದೆ. ಎಲ್ಲ ಪಕ್ಷಗಳಲ್ಲಿ ಕಾರ್ಣಿಕ ನುಡಿಯು ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ.
ನಿನ್ನೆ (ಮೇ 13) ಹೊರಬಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್​ 135 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 66 ಸ್ಥಾನಗಳನ್ನು ಗಳಿಸಿದರೆ, ಜೆಡಿಎಸ್​ ಕೇವಲ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.(ದಿಗ್ವಿಜಯ ನ್ಯೂಸ್​)
ಕಾಂಗ್ರೆಸ್ಸಿಗೆ ಲಿಂಗಾಯತರ ಶಾಪ ವಿಮೋಚನೆ: ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನೆ

ಹೊನ್ನಾಳಿಯಲ್ಲಿ ಹೀನಾಯ ಸೋಲು: ರಾಜಕೀಯ ನಿವೃತ್ತಿ ಮಾತನಾಡಿ ಕಣ್ಣೀರಿಟ್ಟ ರೇಣುಕಾಚಾರ್ಯ

ವರುಣದಲ್ಲಿ ವಿ. ಸೋಮಣ್ಣ ಹೀನಾಯ ಸೋಲು: ಪ್ರತಾಪ್​ ಸಿಂಹ ಹೇಳಿಕೆಗಳೇ ಮುಳುವಾಯಿತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
