ರಾಮನಗರ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖವಾಗಿದ್ದು ಒಂದಕಿಗೆ ಸಾವಿನ ಸಂಖ್ಯೆ ಇಳಿದಿದೆ.
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಅಪಘಾತ ಸಂಖ್ಯೆ ಇಳಿಕೆಯಾಗಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ಮೇ ತಿಂಗಳೊಂದರಲ್ಲೇ 29 ಮಂದಿ ಸಾವಿಗೀಡಾಗಿದ್ದರು. ಜೂನ್ ತಿಂಗಳಿನಲ್ಲಿ 28ಮಂದಿ ಸಾವನ್ನಪ್ಪಿದ್ದು ಜುಲೈನಲ್ಲಿ ಕೇವಲ 8ಕ್ಕೆ ಸಾವಿನ ಸಂಖ್ಯೆ ಇಳಿದಿತ್ತು.
ರಾಮನಗರ ವ್ಯಾಪ್ತಿಯಲ್ಲಿ 3, ಮಂಡ್ಯ ವ್ಯಾಪ್ತಿಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಈ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಅಪಘಾತ ಸಂಖ್ಯೆ ಇಳಿಮುಖ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತಷ್ಟು ಇಳಿಮುಖ ಆದರೆ ವೇಗ ಮಿತಿ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಪ್ರತಿ ಗಂಟೆಗೆ 100 ರಿಂದ 120ಕಿ.ಮೀಗೆ ಏರಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + four =
Remember me
