ಮೈಸೂರು:ವಿಶ್ವವಿಖ್ಯಾತ ದಸರಾ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ. ವಿಜಯದಶಮಿ ಪ್ರಯುಕ್ತ ಅರಮನೆ ಆವರಣದಲ್ಲಿ ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭಗೊಂಡಿದೆ. 9 ಗಂಟೆಗೆ ಅಂಬಾವಿಲಾಸದಲ್ಲಿ ವಜ್ರಮುಷ್ಠಿ ಕಾಳಗ ಶುರುವಾಗಿದೆ.
ಕಳೆದ 9 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಖಾಸಗಿ ದರ್ಬಾರ್ ಶರನ್ನವರಾತ್ರಿಯ ಒಟ್ಟೂ 9 ದಿನಗಳ ಕಾಲ ನಡೆಯಲಿದೆ. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ.
ಇಂದು ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಬೆಳ್ಳಿರಥದಲ್ಲಿ ಜನಪದ ಕಲಾತಂಡಗಳ ಜೊತೆಗೆ ಅರಮನೆಯತ್ತ ಹೊರಟಿದೆ. ಮೆರವಣಿಗೆ ವೇಳೆ ಚಾಮುಂಡಿಗೆ ಜೈಕಾರ ಕೂಗಿ ಭಕ್ತರ ಹರ್ಷೋದ್ಗಾರ ಮೊಳಗಿದೆ.
ಬೆಳಗ್ಗೆ 9.30ಕ್ಕೆ ರಾಜರ ಬೆಳ್ಳಿ ರಥಕ್ಕೆ ಪೂಜೆ ನಡೆಯಲಿದ್ದು, 11 ಗಂಟೆಗೆ ಯದುವೀರ್ ವಿಜಯ ಯಾತ್ರೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಭುವನೇಶ್ವರಿ ದೇಗುಲದಲ್ಲಿ ಪೂಜೆ ನಡೆಯಲಿದೆ. ನಂತರ ಯದುವೀರ್ ಒಡೆಯರ್‌ರಿಂದ ಬನ್ನಿ ಪೂಜೆ ನೆರವೇರಲಿದೆ.
ಅರಮನೆಯ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 1.45 ರಿಂದ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4:40 ರಿಂದ 5ರ ಸಮಯದಲ್ಲಿ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಭಿಮನ್ಯು ಆನೆ ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ. 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗುವ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಮೈಸೂರಿನ ಬೀದಿ ಬೀದಿಗಳಲ್ಲಿ ಸಂಚರಿಸಲಿದ್ದಾನೆ. ಅಭಿಮನ್ಯುಗೆ 14 ಅನೆಗಳು ಸಾಥ್ ನೀಡಲಿವೆ.
ನಾಳೆ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ; ವಿಜಯದಶಮಿ ಮೆರವಣಿಗೆಗೆ ಸಕಲ ತಯಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
