ಮೈಸೂರು: ರಾಜ್ಯದ ಹೆಸರಾಂತ ಜಯಚಾಮರಾಜೇಂದ್ರ ಒಡೆಯರ್ ಮೃಗಾಲಯದ ಪಕ್ಷಿಗಳಲ್ಲಿ ಹಕ್ಕಿಜ್ವರದ ವೈರಾಣುಗಳು ಪತ್ತೆಯಾಗಿಲ್ಲ. ಹೀಗಾಗಿ ಪ್ರವಾಸಿಗರು ಆತಂಕಪಡುವುದು ಬೇಡ ಎಂದು ಮೃಗಾಲಯದ ಕಾರ್ಯಕಾರಿ ನಿರ್ದೇಶಕ ಅಜಿತ್​ ಹೇಳಿದ್ದಾರೆ.
ನೆರೆ ರಾಜ್ಯದ ಕೇರಳದಲ್ಲಿ ವ್ಯಕ್ತಿಗಳಲ್ಲಿ ಕರೊನಾ ವೈರಸ್​ ಹಾಗೂ ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆ ಮತ್ತು ಮೈಸೂರಿನಲ್ಲಿ ಕೊಕ್ಕರೆಗಳ ಸಾವಿನ ಹಿನ್ನೆಲೆಯಲ್ಲಿ ಮೃಗಾಲಯದ ಪಕ್ಷಿಗಳಲ್ಲೂ ಹಕ್ಕಿಜ್ವರದ ವೈರಾಣು ಹರಡಿರಬಹುದು ಎನ್ನುವ ಭೀತಿ ಎಲ್ಲರಲ್ಲೂ ಎದುರಾಗಿತ್ತು. ಆದರೆ ಯಾರು ಭಯಪಡುವುದು ಬೇಡ. ಪರೀಕ್ಷಾ ವರದಿಯಲ್ಲಿ ಮೃಗಾಲಯದ ಪಕ್ಷಿಗಳಲ್ಲಿ ಹಕ್ಕಿಜ್ವರದ ವೈರಾಣುಗಳು ಪತ್ತೆಯಾಗಿಲ್ಲ ಎಂದು ಹೇಳಿದರು.
ಮೃಗಾಲಯದ ಎಲ್ಲ ಪ್ರಾಣಿಗಳ ಮಲ ಹಾಗೂ ಪಕ್ಷಿಗಳ ಹಿಕ್ಕೆಯನ್ನು ಸಂಗ್ರಹಿಸಿ 15 ದಿನಕ್ಕೊಮ್ಮೆ ಮಧ್ಯ ಪ್ರದೇಶದ ಭೂಪಾಲ್​ನಲ್ಲಿರುವ ಪ್ರಯೋಗಾಲುಕ್ಕೆ ಕಳುಹಿಸಲಾಗುತ್ತದೆ. ಅಲ್ಲಿ ಪರೀಕ್ಷೆ ಮಾಡಿ ವರದಿ ನೀಡುತ್ತಾರೆ. ವರದಿ ಇಂದು ಕೈಸೇರಿದ್ದು ಹಕ್ಕಿಜ್ವರದ ಸೋಂಕು ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಆಗಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕುಸಿದಿದೆ. ಏಪ್ರಿಲ್​ ಹಾಗೂ ಮೇನಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕವಾಗುತ್ತದೆ. ಮೃಗಾಲಯದಲ್ಲಿ ಹಕ್ಕಿಜ್ವರದ ಬಗ್ಗೆ ಪಶು ವೈದ್ಯ ಇಲಾಖೆ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ ಎಂದು ಅವರು ಹೇಳಿದರು. (ದಿಗ್ವಿಜಯ ನ್ಯೂಸ್​)
ಕೊಕ್ಕರೆಗಳ ಸಾವಿನ ಬಗ್ಗೆ ಆತಂಕಭರಿತ ಅನುಮಾನ…!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 3 =
Remember me
