ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2022ರ ದಸರಾ ಕ್ರೀಡಾಕೂಟಕ್ಕೆ ಒಲಂಪಿಕ್ಸ್​ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಗುರುವಾರ (ಸೆ.29) ಚಾಲನೆ ನೀಡಿದರು.
ದಸರಾ ಕ್ರೀಡಾಕೂಟ ಉಪ ಸಮಿತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಲಾಯಿತು. ಕಲಾ ತಂಡಗಳ ಮೆರುಗಿನೊಂದಿಗೆ ಐದು ವಿಭಾಗಗಳ ಕ್ರೀಡಾಪಟುಗಳ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸ್ ಬ್ಯಾಂಡ್ ಸಂಗೀತ ಎಲ್ಲರನ್ನು ಆಕರ್ಷಿಸಿತು. 5 ವಿಭಾಗಗಳಿಂದ 4500 ಕ್ರೀಡಾಪಟುಗಳು, 27 ಆಟೋಟಗಳಲ್ಲಿ ಸ್ಪರ್ಧಿಸಲಿದ್ದಾರೆ.
ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರೆ, ಕ್ರೀಡಾ ಸಚಿವ ಡಾ.ಸಿ.ನಾರಾಯಣಗೌಡ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ವರ್ಷಾ ಅವರ ನೇತೃತ್ವದಲ್ಲಿ ಗುರುವಾರ ಮುಂಜಾನೆ ಚಾಮುಂಡಿಬೆಟ್ಟದಿಂದ ಹೊತ್ತು ತಂದ ಕ್ರೀಡಾ ಜ್ಯೋತಿಯನ್ನು ಮೇಯರ್ ಶಿವಕುಮಾರ್ ಸ್ವೀಕರಿಸಿದರು. ನಗರದ ವಿವಿಧ ಭಾಗದಲ್ಲಿ ಕ್ರೀಡಾಜ್ಯೋತಿ ಸಂಚರಿಸಿತು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಪಟು ಮೋಹಿತ್ ಎನ್.ರಾಜ್ ಅವರು ಎಲ್ಲ ಕ್ರೀಡಾಪಟುಗಳ ಪರವಾಗಿ ಪ್ರತಿಜ್ಞಾ ಸ್ವೀಕರಿಸಿದರು.
ಸಚಿವ ನಾರಾಯಣಗೌಡ ಮಾತನಾಡಿ, ಮಹಾರಾಜರು ದಸರಾ ಕ್ರೀಡಾ ಪರಂಪರೆಯನ್ನು ಹುಟ್ಟುಹಾಕಿ ಕ್ರೀಡೆಗೆ ಶಕ್ತಿಕೊಟ್ಟರು. ಕ್ರೀಡಾ ಇಲಾಖೆ ಒಳ್ಳೊಳ್ಳೆ ಕೆಲಸ ಮಾಡಿದೆ. 75 ಮಕ್ಕಳನ್ನು ದತ್ತು ಪಡೆದು ಅಂತಾರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುತ್ತಿದೆ. ಈ ಮಕ್ಕಳಿಗೆ ತಲಾ 10 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 504 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಗವನ್ನು ಕ್ರೀಡೆಯಾಗಿ ಸೇರಿಸಿದ್ದೇವೆ. ಕ್ರೀಡೆಗೆ ಮತ್ತಷ್ಟು ಉತ್ತೇಜನ ಕೊಡಲಾಗುವುದು ಎಂದರು.
ಕಾಂಡೋಮ್​ ಬೇಕಾ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಮಹಿಳಾ ಅಧಿಕಾರಿಗೆ ಎದುರಾಯ್ತು ಸಂಕಷ್ಟ!

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

VIDEO: ಇರಾನ್​ ಬಳಿಕ ಟರ್ಕಿಯಲ್ಲೂ ಹಿಜಾಬ್​ಗೆ ಪ್ರತಿರೋಧ- ವೇದಿಕೆಯಲ್ಲಿ ಗಾಯಕಿ ಮಾಡಿದ್ದೇನು ನೋಡಿ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:9 − two =
Remember me
