ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ.ಗಳ ಹಗರಣ ನಡೆದಿದೆ. ಸಿದ್ದರಾಮಯ್ಯನವರಿಗೆ ಘನತೆ, ಗೌರವ ಇದ್ದರೆ, ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಆಫ್ ಬರೋಡದಿಂದ 144 ಕೋಟಿ ರೂಪಾಯಿ ಓವರ್ ಡ್ರಾಫ್ಟ್ (ಸಾಲ) ಪಡೆದಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಇದನ್ನು ಪಡೆಯಲಾಯಿತೇ? ಆ ಕಂಪನಿಗಳಿಗೆ ಚುನಾವಣೆ ವೇಳೆ ಯಾಕೆ ಹಣ ಹಾಕಿದ್ದೀರಿ? ಆ ಕಂಪನಿಗಳ ಮಾಲೀಕರು ಯಾರು? ಆ ಕಂಪನಿಗಳು ಮತ್ತು ಡಿ.ಕೆ.ಶಿವಕುಮಾರ್, ನಾಗೇಂದ್ರ, ಸಿದ್ದರಾಮಯ್ಯರಿಗೆ ಏನು ಸಂಬಂಧ ಎಂದು ಕೇಳಿದರು.
ಈ ಓವರ್ ಡ್ರಾಫ್ಟ್ ಪಡೆಯಲು ಕ್ಯಾಬಿನೆಟ್ ನಿರ್ಣಯ ಮಾಡಿಲ್ಲವೇಕೆ ಎಂದೂ ಪ್ರಶ್ನಿಸಿದರು. ಇದರೊಳಗೆ ನಾಗೇಂದ್ರ ಮಾತ್ರವಲ್ಲದೆ ಅನೇಕ ಅಧಿಕಾರಿಗಳಿದ್ದಾರೆ. ತೆಲಂಗಾಣದಲ್ಲಿ ಚುನಾವಣೆಗೆ ನಿಂತ ಅನೇಕ ಅಭ್ಯರ್ಥಿಗಳೂ ಇದರಲ್ಲಿದ್ದಾರೆ. ಹಣ ಕೊಟ್ಟ ಅನೇಕ ಮಂತ್ರಿಗಳೂ ಕರ್ನಾಟಕದಲ್ಲಿದ್ದಾರೆ. ಇದೊಂದು ಅಂತರರಾಜ್ಯ ಭ್ರಷ್ಟಾಚಾರ. ಆದ್ದರಿಂದ ಸಿಬಿಐ ತನಿಖೆ ನಡೆಸಬೇಕಿದೆ ಎಂದು ಪ್ರತಿಪಾದಿಸಿದರು.
ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ಅಭಿವೃದ್ಧಿ ನಿಗಮವು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ವ್ಯಾಪಾರ ಮಾಡುವ ನಿಗಮವಾಗಿ ಪರಿವರ್ತನೆಯಾಗಿದೆ. ನಿಗಮವು ಐಟಿ ಕಂಪನಿಗೆ ಸಾಲ ಕೊಡುವ ಕೆಲಸ ಮಾಡುವುದಿಲ್ಲ. ಆದರೆ, ಈ ನಿಗಮವು 6+9 ಕಂಪನಿಗಳಿಗೆ ಹಣ ಕೊಟ್ಟಿದೆ. ಆ ಕಂಪನಿಗಳು ಯಾವುವು? ಅವರ ಟ್ರ್ಯಾಕ್ ರೆಕಾರ್ಡ್ ಏನು? ಅವರಿಗೆ ಯಾಕೆ ಹಣ ಕೊಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳನ್ನು ಎನ್.ರವಿಕುಮಾರ್ ಪ್ರಶ್ನಿಸಿದರು.
ಸಾಲ ಕೊಡಲು ಅನುಮತಿ ಕೊಟ್ಟವರು ಯಾರು? ಸಚಿವಸಂಪುಟದಲ್ಲಿ ನಿರ್ಧಾರ ಆಗಿತ್ತೇ? ಎಂದು ಮುಖ್ಯಮಂತ್ರಿ ಮತ್ತು ಸಚಿವ ನಾಗೇಂದ್ರರನ್ನು ಕೇಳಿದರು. ಸಿಎಂ, ಡಿಸಿಎಂಗೆ ಗೊತ್ತಿದ್ದೇ ಇದು ನಡೆದಿದೆ. ಅದನ್ನು ಮುಚ್ಚಿಡುತ್ತಿದ್ದಾರೆ ಎಂದರಲ್ಲದೆ, ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಇದು ಹೊರಕ್ಕೆ ಬಂದಿದೆ. ಈ ಸರ್ಕಾರ ಒಬ್ಬ ಪ್ರಾಮಾಣಿಕ ಅಧಿಕಾರಿಯ ಬಲಿ ಪಡೆದಿದೆ ಎಂದು ಟೀಕಿಸಿದರು.
ಕಳ್ಳರು, ಖದೀಮರು, ಭಯೋತ್ಪಾದಕರನ್ನು, ಉಗ್ರಗಾಮಿಗಳನ್ನು ಸಾಕಿ ಬೆಳೆಸುವ ಸರ್ಕಾರ ಇದು. ಪ್ರಾಮಾಣಿಕರು, ಪ್ರಾಮಾಣಿಕ ಅಧಿಕಾರಿ- ಸಿಬ್ಬಂದಿಗೆ ಸಹಾಯ ಮಾಡುವ ಸರಕಾರ ಇದಲ್ಲ; ಇದು ಗೂಂಡಾಗಳ, ಭಯೋತ್ಪಾದಕರ ಕೇಸು ರದ್ದು ಮಾಡುವ ಸರ್ಕಾರ ಎಂದು ರವಿಕುಮಾರ್ ದೂರಿದರು.
ಭಾರತದಲ್ಲಿ ನಡೆದ ಚುನಾವಣೆಗಳ ಬಗ್ಗೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‍ಡಿಎಗೆ ಸ್ಪಷ್ಟ ಬಹುಮತ ಬರಲಿದ್ದು, 350 ಸೀಟು ದಾಟಿ 401 ಸೀಟುಗಳವರೆಗೆ ಎನ್‍ಡಿಎ ಪಡೆಯಬಹುದೆಂದು ತಿಳಿಸಿದ್ದಾಗಿ ವಿವರಿಸಿದರು.
ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಜನರು ಮುಂದಾಗಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಬಿಜೆಪಿ- ಎನ್‍ಡಿಎ ಗೆಲ್ಲುವ ಮುನ್ಸೂಚನೆ ಲಭಿಸಿದೆ. ಇದು ದೇಶದ 140 ಕೋಟಿ ಜನರಿಗೆ ಹೆಮ್ಮೆಯ ವಿಷಯ. ಆದರೆ, ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂಬ ಅನುಕೂಲಸಿಂಧು ನೀತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಛೇಡಿಸಿದರು.
ಹಿಂದೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ; ಬಿಜೆಪಿ ಸೋಲಲಿದೆ ಎಂದು ಎಕ್ಸಿಟ್ ಪೋಲ್ ಉಲ್ಲೇಖಿಸಿ ಹೇಳಿದ್ದನ್ನು ರವಿಕುಮಾರ್ ನೆನಪಿಸಿದರು. ಬಿಜೆಪಿ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ, ನಿಕಟಪೂರ್ವ ರಾಜ್ಯ ವಕ್ತಾರ ಜಿ.ವಿ. ಕೃಷ್ಣ  ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − fourteen =
Remember me
