ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸುವ ಮೂಲಕ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ ರಾಜ್ಯಕ್ಕೆ ಅನ್ವಯಿಸುವ ರೀತಿ, ಅನನ್ಯವಾಗಿರುವಂತೆ ವರದಿ ಸಿದ್ಧಪಡಿಸಲಾಗಿರುವುದು ಹೊಸ ಬೆಳವಣಿಗೆ.
ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣ ಬದಲಾಯಿಸಿ ನಮ್ಮತನದಿಂದ ಕೂಡಿರುವ ಶಿಕ್ಷಣ ನೀತಿ ಜಾರಿಗೆ ತರುವ ಆಶಯವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ತೀರ್ವನಿಸಿದೆ. ಈ ಸಂಬಂಧ ಮುಂದಿನ ಸಂಪುಟ ಸಭೆಯಲ್ಲಿ ವರದಿ ಚರ್ಚೆಗೆ ಬಂದು ಜಾರಿಗೊಳ್ಳಲಿದೆ. ಅದಕ್ಕಾಗಿ ದೊಡ್ಡ ಸಂಪರ್ಕ ಜಾಲವನ್ನೇ ರಾಜ್ಯ ಸರ್ಕಾರ ಸೃಷ್ಟಿ ಮಾಡಿದೆ. ವಿಶೇಷ ಶೈಕ್ಷಣಿಕ ವಲಯ ಗುರುತಿಸಿ (ಕಲ್ಯಾಣ ಕರ್ನಾಟಕ ಮಂಡಳಿ), ಲಿಂಗಾಧಾರಿತ, ದಿವ್ಯಾಂಗ ನಿಧಿ ಸ್ಥಾಪನೆಯ ಮೂಲಕ ಸಮಾನತೆಗೆ ಉತ್ತೇಜನ ನೀಡುವ ಉದ್ದೇಶವನ್ನು ಉನ್ನತ ಶಿಕ್ಷಣ ನೀತಿ ಒಳಗೊಂಡಿದೆ. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಗುಂಪುಗಳ ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ವಿದ್ಯಾರ್ಥಿ ವೇತನ ದೊರೆಯಲಿದೆ.
ಶಾಲಾ ಸಂಕೀರ್ಣಗಳ ಸ್ಥಾಪನೆ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬದಲಿಸುವ ಉದ್ದೇಶ ಹೊಂದಿದೆ. ಈ ವರದಿ ಶಿಫಾರಸು ಜಾರಿಯಷ್ಟೇ ಅಲ್ಲದೆ ರಾಜ್ಯ ಹಲವು ಗುರಿಗಳನ್ನೂ ಹೊಂದಿದೆ. ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್​ಎ) ಮತ್ತು ಕರ್ನಾಟಕ ಇತರ ಸಂಸ್ಥೆಗಳ ಸ್ಥಾಪನೆ ಕುರಿತು ಸರ್ಕಾರ ಆದೇಶ/ಸುಗ್ರೀವಾಜ್ಞೆ ಹೊಸಡಿಸುವ ಗುರಿ ಹೊಂದಿದೆ. ಅನುಷ್ಠಾನ ನಿಧಿ ಹಂಚಿಕೆ ಹಾಗೂ ಯೋಜನೆ ವಿವರ ಸಿದ್ಧಪಡಿಸಲು ವ್ಯಾಪಕ ಸಮಾಲೋಚನೆ ನಡೆಸಲು ಮುಕ್ತವಾಗಿದೆ.
ತಜ್ಞರೊಂದಿಗೆ ಸಿಎಂ ಸಭೆ:ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ವರದಿಯನ್ನು ಸಿಎಂ ಯಡಿಯೂರಪ್ಪ ಸ್ವೀಕರಿಸಿ ಯೋಜನೆಯ ಸಾಧಕ ಬಾಧಕಗಳ ಕುರಿತು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ನೀತಿ ಜಾರಿಯಿಂದ ಭವಿಷ್ಯದಲ್ಲಿ ರಾಜ್ಯದ ಶಿಕ್ಷಣ ರಂಗದಲ್ಲಾಗುವ ಕ್ರಾಂತಿಕಾರಕ ಬದಲಾವಣೆಗಳು, ಗುಣಮಟ್ಟ ಶಿಕ್ಷಣದ ಖಾತ್ರಿ, ದೇಶಕ್ಕೆ ರಾಜ್ಯ ಕೊಡಬಹುದಾದ ಶೈಕ್ಷಣೀಕ ಕೊಡುಗೆಗಳ ಬಗ್ಗೆ ರ್ಚಚಿಸಿದರು.
ಸಿಎಂ ಹೇಳಿದ್ದೇನು?:ಸಭೆಯ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೆ ತರುವ ಕುರಿತು ಸಂಪುಟ ಸಭೆಯಲ್ಲಿ ರ್ಚಚಿಸಿ ಅನುಷ್ಠಾನಗೊಳಿಸಲಾಗುವುದೆಂದರು. ನೂತನ ಶಿಕ್ಷಣ ನೀತಿಯ ಸಾಧಕ ಬಾಧಕ ಕುರಿತು ಸುದೀರ್ಘ ಚರ್ಚೆ ನಡೆಸಿದ್ದೇವೆ. ದೇಶದಲ್ಲೇ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಲಿದೆ ಎಂದರು.
ಸಚಿವರಿಗೆ ಸೂಚನೆ:ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಸಭೆಯಲ್ಲಿ ಸೂಚಿಸಿದರು. ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾದ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ, ವಾಸುದೇವ ಅತ್ರೆ, ಪೊ›. ಅನುರಾಗ್ ಬೆಹರ್ ಮತ್ತಿತರರು ಉಪಸ್ಥಿತರಿದ್ದರು.
175 ವರ್ಷಗಳ ನಂತರ ಭಾರತ ಸರ್ಕಾರ ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಿದೆ. ಈ ನೀತಿ ನಿರೂಪಣೆಯಲ್ಲಿ ಕರ್ನಾಟಕ ರಾಜ್ಯ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಹಾಗೂ ಸಮಾಜ ಹೆಚ್ಚಿನ ಒತ್ತು ನೀಡಬೇಕೆನ್ನುವುದು ಶಿಕ್ಷಣ ನೀತಿಯ ಆಶಯ .| ಪ್ರೊ. ಎಂ.ಕೆ. ಶ್ರೀಧರ್ಟಾಸ್ಕ್ ಫೋರ್ಸ್ ಸಮಿತಿ ಸದಸ್ಯ
ಟಾಸ್ಕ್​ಫೋರ್ಸ್​ನ ಪ್ರಮುಖ ಶಿಫಾರಸುಗಳುಶಾಲಾ ಶಿಕ್ಷಣ
ಉನ್ನತ ಶಿಕ್ಷಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
