ಬೆಂಗಳೂರು:ನ್ಯಾಚುರಲ್ಸ್‌ ಐಸ್‌ಕ್ರೀಂ ಸಂಸ್ಥೆ ಮೂಲಕ ಖ್ಯಾತಿ ಗಳಿಸಿ ದೇಶದ ಐಸ್‌ಕ್ರೀಂ ಮ್ಯಾನ್‌ ಎಂಬ ಖ್ಯಾತ ಪಡೆದಿದ್ದ ಉದ್ಯಮಿ ರಘುನಂದನ್‌ ಕಾಮತ್‌ ನಿಧನರಾಗಿದ್ದಾರೆ.
ಮಂಗಳೂರು ಮೂಲದ ರಘುನಂದನ್‌ ಕಾಮತ್‌ (75) ಅವರು ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಪತ್ನಿ, ಪುತ್ರರನ್ನು ಅಗಲಿದ್ದಾರೆ.
ಮೂಲ್ಕಿಯಲ್ಲಿ ಜನಿಸಿದ್ದ ರಘುನಂದನ್‌ ಅವರು ತಮ್ಮ ತಂದೆಯಿಂದ ಹಣ್ಣಿನ ವ್ಯಾಪಾರ ಹಾಗೂ ಹಣ್ಣಿನ ವೈಶಿಷ್ಟ್ಯತೆಗಳನ್ನು ಸರಿಯಾಗಿ ಅರಿತುಕೊಂಡಿದ್ದರು. ಇವರು ತಮ್ಮ 14ನೇ ವಯಸ್ಸಿನಲ್ಲಿ ಶಾಲೆ ತೊರೆದು ಮುಂಬೈಗೆ ತೆರಳಿ ಅಲ್ಲಿ ಸೋದರರ ಹೋಟೆಲ್‌ನಲ್ಲಿ ಕೆಲಸ ಆರಂಭಿಸಿದ್ದರು. ಬಳಿಕ 1984ರಲ್ಲಿ ನ್ಯಾಚುರಲ್‌ ಐಸ್‌ಕ್ರೀಂ ಎಂಬ ಸಂಸ್ಥೆಯನ್ನು ಕೇವಲ 4 ಸಿಬ್ಬಂದಿಯಿಂದ ಆರಂಭಿಸಿದರು.
ರಘುನಂದನ್‌ ಅವರ ನ್ಯಾಚುರಲ್‌ ಐಸ್‌ಕ್ರೀಂ ಪ್ರಸ್ತುತ 135ಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿದ್ದು, ವಾರ್ಷಿಕವಾಗಿ 400 ಕೋಟಿ ರು.ಗೂ ಅಧಿಕ ವಹಿವಾಟು ನಡೆಸುತ್ತಿದೆ. ಇವರ ಕಂಪನಿ ದೇಶದ ಟಾಪ್‌ 10 ಕಂಪನಿಗಳಲ್ಲಿ ಒಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
