ಶಿವಮೊಗ್ಗ:ಮದುವೆಯಾಗಿ ಕೇವಲ ನಾಲ್ಕು ದಿನಕ್ಕೆ ನವ ವಿವಾಹಿತೆಯೊಬ್ಬಳು ಕರೊನಾಕ್ಕೆ ಬಲಿಯಾಗಿರುವ ಘಟನೆ ಶುಕ್ರವಾರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಹರಿಗೆ ನಿವಾಸಿ ಪೂಜಾ (24) ಮೃತಪಟ್ಟ ನವ ವಿವಾಹಿತೆ. ಹೊರವಲಯದ ನಿದಿಗೆ ಟಿಇಎಸ್ ಕಾಲನಿಯ ಪೂಜಾಳನ್ನು ಹರಿಗೆ ನಿವಾಸಿ ಮಹೇಶ್ ಮದುವೆಯಾಗಿದ್ದ. ನಗರದ ನಿದಿಗೆ ಟಿಇಎಸ್ ಕಾಲನಿಯ ವಧುವಿನ ಮನೆಯಲ್ಲಿಯೇ ಸೋಮವಾರ ಮದುವೆಯಾಗಿತ್ತು. ಆದರೆ ಎರಡೇ ದಿನಗಳಲ್ಲಿ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ಒಂದೆರಡು ದಿನ ಮೆಡಿಕಲ್‌ನಿಂದ ಮಾತ್ರೆಗಳನ್ನು ತಂದು ನುಂಗಿದ್ದರು. ಆದರೂ ಚೇತರಿಕೆ ಕಂಡಿರಲಿಲ್ಲ. ಆರೋಗ್ಯ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡ ಬಳಿಕ ಶುಕ್ರವಾರ ಬೆಳಗ್ಗೆ ಮಲವಗೊಪ್ಪದ ಖಾಸಗಿ ಕ್ಲಿನಿಕ್‌ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಆದರೆ ಡ್ರಿಪ್ ಹಾಕಿದ ಅರ್ಧ ಗಂಟೆಯಲ್ಲೇ ಪೂಜಾ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ ಕರೊನಾ ಟೆಸ್ಟ್‌ಗೆ ಒಳಪಡಿಸಿದಾಗ ಪೂಜಾಗೆ ಸೋಂಕು ಇರುವುದು ದೃಢಪಟ್ಟಿತ್ತು. ಅದರ ವರದಿ ಕೈಸೇರುವ ಮುನ್ನವೇ ಸೋಂಕು ಬಲಿ ಪಡೆದಿದೆ.
ಸತ್ಯ ತಿಳಿಯುವುದು ಹೇಗೆ?; ಫ್ಯಾಕ್ಟ್​ಚೆಕ್​ಗೆ ಇಲ್ಲಿವೆ ಸುಲಭದ ಮಾರ್ಗಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
