ಬೆಂಗಳೂರು:ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಉಡುಪಿ, ಕನ್ನಡ, ಉತ್ತರ ಕನ್ನಡ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಾ. 22ರಿಂದ ಮಾ.24ರವರೆಗೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ ಮಾ.22ರಂದು ಗುಡುಗು ಮಿಂಚು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಮುಂದಿನ ಮುರ್ನಾಲ್ಕು ದಿನ ಕರಾವಳಿ, ಮಲೆನಾಡು ಮತ್ತು ದಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲೆಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.ಗುರುವಾರ ಕಲಬುರಗಿ 37.6, ಹಂಪೆ 36.9, ಬದಾಮಿ 36.4, ವಿಜಯಪುರ 35.2 ಡಿ.ಸೆ. ಉಷ್ಣಾಂಶ ದಾಖಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − ten =
Remember me
