ಬೆಂಗಳೂರು:ಹಿಂದೂ ಸಂಘಟನೆ ಕಾರ್ಯಕರ್ತ ರುದ್ರೇಶ್ ಹತ್ಯೆಯ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಝೀ (41) ಬಗ್ಗೆ ಮಾಹಿತಿ ನೀಡಿದರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.
ಈತನಿಗೆ ಎನ್‌ಐಎ ತಂಡ ಎಲ್ಲೆಡೆ ತೀವ್ರ ಹುಡುಕಾಟ ನಡೆಸುತ್ತಿದ್ದು, ಈತನ ಮಾಹಿತಿ ನೀಡಿದವರಿಗೆ ಇದೀಗ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. 2016ರ ಅ.16ರಂದು ಬೆಳಿಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ ಅವರನ್ನು 2 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ಇದನ್ನೂ ಓದಿ:ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ
ಎನ್‌ಐಎ ಅಧಿಕಾರಿಗಳು ಈ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಬೆಂಗಳೂರಿನ ಆರ್‌ಟಿ ನಗರದ ಎರಡನೇ ಬ್ಲಾಕ್ ನಿವಾಸಿ ಮೊಹಮ್ಮದ್ ಗೌಸ್ ನಯಾಝೀ ಅಲಿಯಾಸ್ ಗೌಸ್ ಭಾಯ್ ಎಂಬಾತನಿಗೆ ಹಲವು ವರ್ಷಗಳಿಂದ ಎನ್‌ಐಎ ಅಧಿಕಾರಿಗಳು ಎಲ್ಲೆಡೆ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಆತನ ಸುಳಿವೂ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಚಿಕಿತ್ಸೆಗೆಂದು ಉಡುಪಿಯಿಂದ ಬೆಂಗಳೂರಿಗೆ ಬಂದವನ ಎರಡೂ ಕಾಲು ಪೂರ್ತಿ ಜಖಂ!
ಹೀಗಾಗಿ ಮೊಹಮ್ಮದ್ ಗೌಸ್ ನಯಾಝೀ ಬಗ್ಗೆ ಮಾಹಿತಿ ನೀಡಿದವರಿಗೆ ೫ ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಜತೆಗೆ ಆತನ ಸುಳಿವು ಸಿಕ್ಕಿದರೆ ಎನ್‌ಐಎ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿಂದೆ ಆತ ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಇನ್ನು ಈ ಪ್ರಕರಣದಲ್ಲಿ ಶಾಮೀಲಾಗಿದ್ದರು ಎನ್ನಲಾದ ಆರೋಪಿಗಳೆಲ್ಲರೂ ಜೈಲಿನಲ್ಲಿದ್ದಾರೆ. ಆದರೆ, ಮೊಹಮ್ಮದ್ ಗೌಸ್ ಇನ್ನೂ ತಲೆಮರೆಸಿಕೊಂಡಿದ್ದು, ಆತ ಇಂತಹ ಹಲವು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × three =
Remember me
