ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ವಿವಿಧ ಕಡೆ ಎನ್ಐಎ ದಾಳಿ ನಡೆಸಿ ಎಸ್ ಡಿಪಿಐ ಮುಖಂಡರಾದ ಅಬ್ದುಲ್ ಖಾದರ್ ಹಾಗೂ ಅಬೂಬಕ್ಕರ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ, ಪಿಎಫ್ಐ ಕಚೇರಿಗೆ, ಕೂಳೂರು, ಕಾವೂರು, ಉಪ್ಪಿನಂಗಡಿ, ಬಜಪೆ ಕಿನ್ನಿಪದವು, ವಿಟ್ಲ ಬೊಳಂತೂರು ಮೊದಲಾದ ಕಡೆ ಮುಖಂಡರ ಮನೆಗೆ, ಪುತ್ತೂರು ಹಾಗೂ ಬಂಟ್ವಾಳದ ಕಚೇರಿಗಳಿಗೂ ದಾಳಿ ನಡೆದಿದೆ. ಈ ಸಂದರ್ಭ ಹಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನಲ್ಲಿ ದಾಳಿ ವೇಳೆ ಪಿಎಫ್ ಐ, ಎಸ್ ಡಿಪಿಐ ಕಾರ್ಯಕರ್ತರು ಜಮಾಯಿಸಿ ದಾಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದ ಪೊಲೀಸ್ ತಂಡಗಳು ದಾಳಿ ವೇಳೆ ಎನ್ ಐಎ ಅಧಿಕಾರಿಗಳಿಗೆ ಸಾಥ್ ನೀಡಿದ್ದಾರೆ. ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಬೆಳಗ್ಗೆ 6 ಗಂಟೆ ವೇಳೆಗೆ ಎನ್ಐಎ ದಾಳಿ ನಡೆದಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
