ತೀರ್ಥಹಳ್ಳಿ:ಭಾರಿ ಸಂಚಲನ ಮೂಡಿಸಿರುವ ಕುಕ್ಕರ್ ಬಾಂಬ್ ಸ್ಫೋಟ ಕೃತ್ಯದ ಆರೋಪಿ ಶಾರಿಖ್ ಸಂಬಂಧಿಕರ ತೀರ್ಥಹಳ್ಳಿಯ ಮನೆಗಳ ಮೇಲೆ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳ ತಂಡ ಬುಧವಾರ ನಸುಕಿನಲ್ಲಿ ದಾಳಿ ನಡೆಸಿದೆ.
ಪಟ್ಟಣದ ಸೊಪ್ಪುಗುಡ್ಡೆ ಬಡಾವಣೆಯ ಮೀನು ಮಾರ್ಕೆಟ್ ಬಳಿ ಇರುವ ಮನೆಗಳಲ್ಲಿ ಅಧಿಕಾರಿಗಳ ತಂಡ ಅಂದಾಜು 10 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿತು. ಐದು ಕಾರುಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತಿನೊಂದಿಗೆ ನಸುಕಿನಲ್ಲಿ ಬಂದಿಳಿದ ಮಹಿಳೆಯರನ್ನೂ ಒಳಗೊಂಡ 15 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿತು.
ಶಾರಿಖ್ ತಂದೆಯ ಹೆಸರಿನಲ್ಲಿದ್ದು, ಈಗಾಗಲೇ ಬೇರೆಯವರಿಗೆ ಮಾರಾಟವಾಗಿರುವ ಕಾಂಗ್ರೆಸ್ ಕಚೇರಿ ಇರುವ ಕಟ್ಟಡದ ಮೇಲೂ ದಾಳಿ ನಡೆಸಿದರು. ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಈ ಆರೋಪಿಗಳು ಮತ್ತು ಅವರ ಕುಟುಂಬದ ನಡುವಿನ ಹಣಕಾಸು ವ್ಯವಹಾರವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಈ ಮೊದಲು ಎರಡು ಮೂರು ಬಾರಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ ಆರೋಪವಿರುವ ಮತೀನ್ ಹಾಗೂ ಮಾಜ್ ಅವರ ಮನೆಗಳಿಗೆ ರಾಷ್ಟ್ರೀಯ ತನಿಖಾದಳ ಬಂದಿದ್ದಕ್ಕಿಂತ ಭಿನ್ನವಾಗಿ ಈ ಬಾರಿ ಬಿಗಿ ಪೋಲಿಸ್ ಬಂದೋಬಸ್ತಿನ ಪಹರೆಯಲ್ಲಿ ಶಾರಿಖ್ ಮನೆಗಳ ತಪಾಸಣೆ ನಡೆದಿದೆ. ಈ ತಂಡದೊಂದಿಗೆ ಬಂದಿದ್ದ ಶಸ್ತ್ರಸಜ್ಜಿತ ಪೊಲೀಸರು ಸಮೀಪದ ಮನೆಗಳಿಗೆ ತೆರಳಿ ಸುದ್ಧಿ ಮಾಧ್ಯಮಗಳಿಗೆ ಮಾಹಿತಿ ನೀಡಬಾರದೆಂಬ ಎಚ್ಚರಿಕೆ ಕೊಟ್ಟಿರುವುದು ಅಲ್ಲಿನ ನಿವಾಸಿಗಳಲ್ಲಿ ಭೀತಿಯ ವಾತಾವರಣ ಕಂಡು ಬಂತು.
ನಮ್ಮ ಮನೆ ಮತ್ತು ಕಚೇರಿ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂದು ಸುದ್ದಿ ಬಿತ್ತರವಾದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಇದೊಂದು ಕಪೋಲಕಲ್ಪಿತ ವರದಿ. ಈ ದಾಳಿಗೂ ಕಾಂಗ್ರೆಸ್ ಪಕ್ಷಕ್ಕೂ ಅಥವಾ ನನಗೂ ಸಂಬಂಧವಿಲ್ಲ. ಹಾಸಿಂ ಎಂಬುವರಿಂದ ಕೆಲ ವರ್ಷಗಳ ಹಿಂದೆ ಈ ಕಟ್ಟಡವನ್ನು ಕಾಂಗ್ರೆಸ್ ಕಚೇರಿಗಾಗಿ ಲೀಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..
ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ; ಒಂದೇ ವಾರದಲ್ಲಿ ದಿನ ಬಿಟ್ಟು ದಿನ 3 ಮಕ್ಕಳು ಹೃದಯಾಘಾತದಿಂದ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
