ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಕಾವೇರಿ ನೀರಿನ ವಿಚಾರದಲ್ಲಿ ಆಡುತ್ತಿರುವ ಕಪಟ ನಾಟಕವನ್ನು ನಿಲ್ಲಿಸಬೇಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ನಟ ನಿಖಿಲ್​ ಕುಮಾರಸ್ವಾಮಿ ಹೇಳಿದರು.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು 15 ದಿನಗಳವರೆಗೆ ಕಾವೇರಿ ನೀರು ಬಿಡಲು ಸುಪ್ರೀಂಕೋರ್ಟ್​ ಇಂದು ಆದೇಶ ಹೊರಡಿಸಿದೆ. ಈ ಬಗ್ಗೆ ನಿಖಿಲ್ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕಾವೇರಿ ಕನ್ನಡಿಗರ ಹಕ್ಕು, ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ:ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ, ಮಳೆ ಕೈಕೊಟ್ಟಿದೆ ಹಾಗೂ ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.
ಬ್ರಿಟಿಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ. ಸ್ವಾತಂತ್ರ್ಯ ನಂತರವೂ ಇದು ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದು ನಿಖುಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.
ಖ್ಯಾತ ನಿರ್ಮಾಪಕನ ಜತೆ ಬಹುಭಾಷಾ ನಟಿ ತ್ರಿಷಾ ಮದುವೆ? ಶೀಘ್ರದಲ್ಲೇ ಘೋಷಣೆ ಸಾಧ್ಯತೆ

ರೈಲ್ವೇ ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು ಕೂಲಿ ಕಾರ್ಮಿಕರ ಕಷ್ಟ ಆಲಿಸಿದ ರಾಹುಲ್ ಗಾಂಧಿ!

ನೀವು ಹೆದರಿ ಕುಳಿತರೆ ನಾವು ಬೀದಿಗಿಳಿಯಬೇಕಾಗುತ್ತೆ: ಸಿಎಂಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾರ್ನಿಂಗ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 18 =
Remember me
