ಮೈಸೂರು: ಚೀನಾದಲ್ಲಿ ಆತಂಕ ಮೂಡಿಸಿರುವ ಕರೊನಾ ವೈರಸ್ ಪ್ರಕರಣ ಈ ವರೆಗೆ ರಾಜ್ಯದಲ್ಲಿ ಪತ್ತೆಯಾಗಿಲ್ಲ. ಯಾರಿಗೂ ಈ ಸೋಂಕು ತಗಲಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.ನಗರದಲ್ಲಿ ಸೋಮವಾರ ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರೊನಾ ವೈರಸ್ ಈಗಾಗಲೇ ಚೀನಾದಲ್ಲಿ 120 ಜನರು, ನೆರೆಯ ಕೇರಳಾದಲ್ಲೂ ಮೂವರನ್ನು ಬಲಿ ಪಡೆದಿದೆ. ಈ ರೋಗ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಂಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 44 ಜನರ ರಕ್ತ ತಪಾಸಣೆ ಮಾಡಲಾಗಿದೆ. ಈ ಪೈಕಿ 29 ಜನರ ವರದಿ ನೆಗಟಿವ್ ಬಂದಿದೆ. ಉಳಿದವರ ವರದಿ ಬರಬೇಕಿದ್ದು, ಅವರಲ್ಲೂ ಈ ಸೋಂಕು ಕಾಣಿಸಿಕೊಂಡಿಲ್ಲ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ತಿಳಿಸಿದರು.ಭಾರತಕ್ಕೆ ಈಗಾಗಲೇ ಕಾಲಿಟ್ಟಿರುವ ಈ ಸೋಂಕು ರಾಜ್ಯದಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲೂ 10 ಹಾಸಿಗೆಗಳ ವಿಶೇಷ ವಾರ್ಡ್ ಸಿದ್ಧಪಡಿಸಲಾಗಿದೆ. ಜತೆಗೆ, ವಿಮಾನನಿಲ್ದಾಣ, ಬಂದರು ಪ್ರದೇಶಕ್ಕೆ ಬರುವ ಚೀನಾ, ಇತರ ದೇಶಗಳ ಪ್ರವಾಸಿಗರ ರಕ್ಷಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.ಈ ವಿಷಯವಾಗಿ ಈಗಾಗಲೇ 2 ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ಈ ರೋಗಕ್ಕೆ ಔಷಧವಿಲ್ಲ. ಅದನ್ನು ಬೇರೆ ಕಡೆಯಿಂದ ತರಿಸಿಕೊಳ್ಳಲಾಗುವುದು. ಜತೆಗೆ, ಆಯುರ್ವೇದ ಔಷಧ ಬಳಕೆ ಕುರಿತು ಸಂಬಂಧಪಟ್ಟವರ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
