ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಗೊಳಿಸಿದೆ. ಅಲ್ಲದೆ, ಈ ಕುರಿತಾಗಿ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದೆ.
ಆರ್​ಪಿಸಿ ಸೆಕ್ಷನ್ 125ರ ಅನ್ವಯ ಸೊಸೆಗೆ ಹಾಗೂ ಮೊಮ್ಮಕ್ಕಳಿಗೆ ಮಾಸಿಕ ಜೀವನಾಂಶ ನೀಡುವಂತೆ ಆದೇಶಿಸಿದ್ದ ತೀರ್ಪು ಪ್ರಶ್ನಿಸಿ ಅತ್ತೆ-ಮಾವ (ಮೃತ ಪತಿಯ ಅಪ್ಪ ಅಮ್ಮ) ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣ ಸಂಬಂಧ ಮಾಹಿತಿ ಕೊರತೆ ಇರುವ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಿಆರ್​ಪಿಸಿ ಸೆಕ್ಷನ್ 125ರ ಅಡಿ ಮಾಸಿಕ ಜೀವನಾಂಶ ನೀಡುವಂತೆ ಹೇಳಿದೆ ಎಂದು ವಾದಿಸಿ ಅರ್ಜಿ ಪರಿಗಣಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಪತಿಯ ನಿಧನದ ಬಳಿಕ ಪತ್ನಿ (ಸೊಸೆ) ಹಾಗೂ ಮಕ್ಕಳ ಕುರಿತು ಅತ್ತೆ ಮಾವ ಕಾಳಜಿ ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಅತ್ತೆ-ಮಾವನ ಬಳಿ ಜೀವನಾಂಶ ಕೋರಿದ್ದಾರೆ. ಇದು ಆಕೆ ಜೀವನ ನಡೆಸಲು ಅಗತ್ಯವೂ ಹೌದು. ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವುದು ಸೂಕ್ತ. ಈ ನಿಟ್ಟಿನಲ್ಲಿ ಮರುಪರಿಶೀಲನಾ ಅರ್ಜಿ ವಜಾಗೊಳಿಸುವಂತೆ ಪ್ರತಿವಾದಿ ಪರ ವಕೀಲರು ಮನವಿ ಮಾಡಿದರು.
ವಾದ-ಪ್ರತಿವಾದದ ಬಳಿಕ ನ್ಯಾಯಲಯವು ಅರ್ಜಿದಾರರಿಂದ ನ್ಯಾಯಾಲಯಕ್ಕೆ ಸಲ್ಲಿಕೆಯಾದ ದಾಖಲೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿತು. ಬಳಿಕ ಸಿಆರ್​ಪಿಸಿ ಸೆಕ್ಷನ್ 125 ಅಡಿ ಸೊಸೆಯು ಅತ್ತೆ-ಮಾವನ ವಿರುದ್ಧ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ರದ್ದುಪಡಿಸಿ, ಪರಿಷ್ಕರಣೆ ಅರ್ಜಿ ಅಂಗೀಕರಿಸುವಂತೆ ಆದೇಶಿಸಿತು.
ಏನಿದು ಪ್ರಕರಣ?:ಅರ್ಜಿದಾರರು ಮಗನ ನಿಧನದ ನಂತರ ಸೊಸೆ ತನಗೆ ಹಾಗೂ ತನ್ನ ನಾಲ್ಕು ಮಕ್ಕಳಿಗೆ ಮಾಸಿಕ ಜೀವನಾಂಶ ನೀಡುವಂತೆ ಕೋರಿ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯವು ಮಾಸಿಕ 20,000 ಹಾಗೂ ಮಕ್ಕಳಿಗೆ 5,000 ರೂ. ಪಾವತಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆಕೆಯ ಅತ್ತೆ-ಮಾವ ಹೈಕೋರ್ಟ್ ಮೇಟ್ಟಿಲೇರಿದ್ದರು.
ಮಗನ ಆಸ್ತಿಗೆ ಮನವಿ
ಅರ್ಜಿದಾರರು ಮಗನಿಗೆ 45 ಲಕ್ಷ ರೂ. ಮೌಲ್ಯದ ಆಸ್ತಿ ಮತ್ತು ಹುಬ್ಬಳ್ಳಿಯಲ್ಲಿ ನಾಲ್ಕು ನಿವೇಶನಗಳಿದ್ದು, ಈ ಪೈಕಿ ತಾವು 7.50 ಲಕ್ಷ ರೂ. ಹಾಗೂ ಒಂದು ನಿವೇಶನ ತೆಗೆದುಕೊಳ್ಳುವುದಾಗಿ ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಪೀಠಕ್ಕೆ ತಿಳಿಸಿದ್ದರು.
ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂಬುದು ಬಹಳ ವ್ಯಥೆಯಾಗುತ್ತಿದೆ: ಹೀಗ್ಯಾಕೆ ಹೇಳಿದ್ರು ಡಿಕೆ ಶಿವಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
