ಬೆಂಗಳೂರು:ಇದೇ ಸೆಪ್ಟೆಂಬರ್ 22 ರಂದು ನಡೆಸಲು ಉದ್ದೇಶಿಸಲಾಗಿರುವ ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.
ಇದನ್ನೂ ಓದಿ:ರಾಜಸ್ಥಾನ: ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ!
ರಾಜಧಾನಿ ಬೆಂಗಳೂರು ಸೇರಿದಂತೆ 6 ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯನ್ನು ಸೆ.22 ರಂದು ನಡೆಸಲು ತಯಾರಿ ನಡೆದಿದ್ದು ಹೆಚ್ಚಿನ ನಿಗಾ ವಹಿಸಲು ಪೊಲೀಸ್ ಇಲಾಖೆಯ ನೆರವು ಕೋರಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು ಮನವಿ ಮಾಡಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಮ್ಮೆ ಈ ಪರೀಕ್ಷೆ ಮುಂದೂಡಲಾಗಿದೆ. ಪುನಃ ಹಾಗೆಯೇ ಮಾಡಿದರೆ ಪರೀಕ್ಷೆ ನಡೆಸುವುದು ಯಾವಾಗ? ಇಷ್ಟಕ್ಕು ಯಾವುದಾದರು ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗಂತ ಪರೀಕ್ಷೆ ಇಲ್ಲದ ದಿನ ಹುಡುಕುವುದು ಕೂಡ ಕಷ್ಟ. ನಾವು ಈ ದಿನಾಂಕವನ್ನು ಮೂರು ತಿಂಗಳ ಮೊದಲೇ ತೀರ್ಮಾನಿಸಿದ್ದು, ಆ ಪ್ರಕಾರ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ವಿಮಾನ ನಿಲ್ದಾಣಗಳಲ್ಲಿ ಯಾವ ರೀತಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಾರೋ ಅದೇ ರೀತಿಯ ತಪಾಸಣೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ನಡೆಯುತ್ತದೆ. ದೈಹಿಕ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳ ಹೆಬ್ಬೆಟ್ಟು ಗುರುತು ಹಾಗೂ ಭಾವಚಿತ್ರವನ್ನು ಸಂಗ್ರಹಿಸಿಕೊಂಡಿದ್ದು, ಅದೇ ಡಾಟಾ ಇಟ್ಟುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ನಕಲಿ ಅಭ್ಯರ್ಥಿಗಳು ನುಸುಳುವುದಕ್ಕೂ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.
ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡಲು ವಾಹನ ತಯಾರಕರಲ್ಲಿ ಸಚಿವ ಗಡ್ಕರಿ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
