ಬೆಳಗಾವಿ:ಮಕ್ಕಳ ಕಳವಿಗೆ ಯತ್ನಿಸಿದವನೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡು ಏಟು ಬೀಳುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿದೆ.
ಸೋಮವಾರ ಮಧ್ಯಾಹ್ನ ವೇಳೆ ಪಟ್ಟಣದ ಪಿಂಜಾರ ಗಲ್ಲಿಯಲ್ಲಿ ಮಕ್ಕಳ ಕಳ್ಳನೋರ್ವ ಚಿಕ್ಕ ಬಾಲಕನನ್ನು ಕಳ್ಳತನ ಮಾಡಿ ಕರೆದೊಯ್ಯುವಾಗ ಗಲ್ಲಿಯ ಜನತೆಯಿಂದ ಧರ್ಮದೇಟು ತಿಂದು ಪರಾರಿಯಾದ ಘಟನೆ ನಡೆದಿದೆ.
ಸ್ವಯಂ ಸತೀಶ ಅರವಳ್ಳಿ ಎಂಬ ನಾಲ್ಕು ವರ್ಷದ ಬಾಲಕನು ಮನೆಯ ಮುಂದೆ ಆಟವಾಡುತ್ತಿದ್ದಾಗ ಕಳ್ಳನು ಐಸ್​ಕ್ರೀಮ್ ಮಾರಾಟ ಮಾಡುವ ವೇಷದಲ್ಲಿ ಬಂದು ಬಾಲಕನನ್ನು ಡಬ್ಬಿಯಲ್ಲಿ ತುಂಬಿಕೊಂಡಿದ್ದಾನೆ. ಬಾಲಕ ಅಳಲು ಪ್ರಾರಂಭಿಸಿದ್ದಾನೆ. ಬಾಲಕನು ಕಿರುಚಾಡುವ ಶಬ್ದ ಕೇಳಿ ತಾಯಿ ಆಶಾ ಮನೆಯಿಂದ ಹೊರಗೆ ಬಂದು ನಮ್ಮ ಮಗನನ್ನು ಏಕೆ ಡಬ್ಬಿಯಲ್ಲಿ ಕುಳಿಸಿಕೊಂಡು ಹೋಗುತ್ತಿರುವೆ ಎಂದು ಪ್ರಶ್ನಿಸಿದ್ದಾಳೆ.
ಆಗ ಅವನು ಮಾತನಾಡದೆ ಸುಮ್ಮನಾದಾಗ ಕೂಗಾಡಿ ಜನರನ್ನು ಸೇರಿಸಿದ್ದಾಳೆ. ಅಲ್ಲಿ ಸೇರಿದ ಜನರು ಕಳ್ಳನನ್ನು ಪ್ರಶ್ನಿಸಿದಾಗ ಅವನು ಮಾತನಾಡದೆ ಸುಮ್ಮನಿದ್ದಾಗ ಥಳಿಸಿದ್ದಾರೆ. ಅಷ್ಟರಲ್ಲಿ ಕಳ್ಳನು ಕೊಸರಿಕೊಂಡು ಜವಳಿ ಖೂಟನತ್ತ ಪರಾರಿಯಾಗಿದ್ದಾನೆ. ಕಳ್ಳನು ಸುಮಾರು 35-40 ವರ್ಷದವನಿದ್ದು, ಕಪ್ಪಗೆ ಗಡ್ಡದಾರಿಯಾಗಿದ್ದಾನೆ. ಅವನು ಕನ್ನಡ ಬಲ್ಲವನಲ್ಲ ಬೇರೆ ರಾಜ್ಯದವನು ಇರಬಹುದೆಂದು ಮಾತನಾಡಿಕೊಳ್ಳುತ್ತಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸಿ ಸಂಶಯಾಸ್ಪದ ವ್ಯಕ್ತಿಗಳ ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಸಿಪಿಐ ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ.
ಅಂಗನವಾಡಿಗೆ ಸಣ್ಣ ಮಕ್ಕಳು ತೆರಳುತ್ತಾರೆ. ಮಕ್ಕಳ ಕಳ್ಳರ ದಂಡು ಪಟ್ಟಣಕ್ಕೆ ಆಗಮಿಸಿದ ಶಂಕೆ ಈ ಘಟನೆಯಿಂದ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೂಡಲೇ ಪೊಲೀಸರು ಹೆಚ್ಚಿನ ನಿಗಾ ವಹಿಸಿ ಜನತೆಯನ್ನು ಅಭಯ ನೀಡಬೆಕು ಹಾಗೂ ಪ್ರಕರಣ ಕುರಿತು ತನಿಖೆ ನಡೆಸಬೇಕು. ಪಟ್ಟಣದಲ್ಲಿ ಅಳವಡಿಸಿದ ಸಿಸಿ ಕ್ಯಾಮರಾಗಳನ್ನು ದುರಸ್ತಿ ಪಡಿಸಬೇಕು. ವಾಪಾರಸ್ಥರು ಹಾಗೂ ಸಾರ್ವಜನಿಕರು ಅಳವಡಿಸಿದ ಸಿಸಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಡಲು ಸಲಹೆ ನೀಡಬೇಕು ಎಂದು ಇಲ್ಲಿನ ವಿಶ್ವ ಹಿಂದೂ ಪರಿಷದ್ ಮುಖಂಡ ಅಶೋಕ ಸವದತ್ತಿ ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷನಿಗೇ ಬಾರಿಸಿದ ಗ್ರಾಮಸ್ಥರು; ಸಮಸ್ಯೆಗೆ ಸ್ಪಂದಿಸದ್ದಕ್ಕೆ ಸಿಟ್ಟಿನಿಂದ ಹೊಡೆದರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 11 =
Remember me
