ಬೆಂಗಳೂರು:ದೀರ್ಘ ಕಾಲದ ಅನಾರೋಗ್ಯದಿಂದ ಇಂದು ನಿಧನರಾದ ಹಿರಿಯ ನಟ ಲೋಹಿತಾಶ್ವ ಅವರ ಪಾರ್ಥಿವ ಶರೀರಕ್ಕೆ ಕಂದಾಯ ಸಚಿವ ಆರ್. ಅಶೋಕ್ ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಹಲವು ಬಾರಿ ಲೋಹಿತಾಶ್ವ ಅವರ ಮನೆಗೆ ಬಂದು ಅವರ ಆರೋಗ್ಯ ವಿಚಾರಿಸಿಕೊಂಡು ಹೋಗಿದ್ದೆ. ಆರೋಗ್ಯದ ಸಮಸ್ಯೆ ಆದಾಗ ಆಸ್ಪತ್ರೆಗೂ ಹೋಗಿದ್ದೆ. ಅವರ ಚೇತರಿಕೆಗೆ ಸಾಕಷ್ಟು ಪ್ರಯತ್ನಗಳನ್ನೂ ಮಾಡಿದ್ದೆ. ಆದರೂ ಅವರು ಈಗ ನಮ್ಮ ನಡುವೆ ಇಲ್ಲ ಎನ್ನುವುದೇ ತೀವ್ರ ಬೇಸರ ತರಿಸುವ ಸಂಗತಿ…’ ಎಂದರು.
‘ಲೋಹಿತಾಶ್ವ 600ಕ್ಕೂ ಅಧಿಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ಇಂಗ್ಲಿಷ್ ಲೆಕ್ಚರರ್ ಆಗಿ ಸರ್ಕಾರಿ ಸೇವೆ ಸಹ ಸಲ್ಲಿಸಿದ್ದರು. ಒಳ್ಳೆಯ ನಟನೆ ಮುಖಾಂತರ ಜನರಿಗೆ ಸಂದೇಶ ಕೊಡುವಂತಹ ನಟನನ್ನು ಕಳೆದುಕೊಂಡಿದ್ದೇವೆ. ಪ್ರೊ. ಲೋಹಿತಾಶ್ವ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಶೋಕ್ ಹೇಳಿದರು.
‘ಪುನೀತ್ ರಾಜಕುಮಾರ್ ನಂತರ ಮತ್ತೊಬ್ಬ ನಟನನ್ನು ಕಳೆದುಕೊಂಡಿದ್ದೇವೆ. ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರ‌ವೇ ಭರಿಸಲಿದೆ’ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 2 =
Remember me
