ಬೆಂಗಳೂರು:ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರಾ್ಯಕಿಂಗ್ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿ.1ರಿಂದ ಆದೇಶ ಅನ್ವಯ ವಾಗಲಿದ್ದು, ಒಂದು ವರ್ಷದ ಅವಧಿಯೊಳಗೆ ಅಳವಡಿಸಿಕೊಳ್ಳುವಂತೆ ಗಡುವು ನೀಡಲಾಗಿದೆ.
ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರಾ್ಯಕಿಂಗ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸಬೇಕಿದ್ದು, 2024ರ ನ.30ರವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ವಿಜಯವಾಣಿ ನ.14ರಂದು ‘ಡಿಸೆಂಬರ್​ಗೆ ಜಿಪಿಎಸ್ ಕಡ್ಡಾಯ’ ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
ವಾಹನಗಳಿಗೆ ವಿಎಲ್​ಟಿ ಮತ್ತು ಪ್ಯಾನಿಕ್ ಬಟನ್ ಡಿವೈಸ್​ಗಳನ್ನು ಅಳವಡಿಸುವ ಸಂಬಂಧ ಗುತ್ತಿಗೆ ನೀಡಲು ಸಾರಿಗೆ ಇಲಾಖೆ 2023 ಫೆ.9ರಂದು ಇ-ಟೆಂಡರ್ ಮೂಲಕ ಕಂಪನಿಗಳಿಂದ ಅರ್ಜಿ ಆಹ್ವಾನಿಸಿತ್ತು. ಇದರಲ್ಲಿ ಅರ್ಹತೆ ಹೊಂದಿರುವ 13 ಕಂಪನಿಗಳು ಆಯ್ಕೆಯಾಗಿದ್ದವು. ನಂತರ ಅ.16 ರಂದು ಸಾರಿಗೆ ಆಯುಕ್ತರು ಮತ್ತು ರಸ್ತೆ ಸುರಕ್ಷತಾ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವರವಾಗಿ ರ್ಚಚಿಸಿ ವಿಎಲ್​ಟಿ ಮತ್ತು ಪ್ಯಾನಿಕ್ ಬಟನ್ ಸಾಧನಗಳಿಗೆ ಸ್ಪರ್ಧಾತ್ಮಕ ದರ ನಿಗದಿಪಡಿಸಲಾಗಿತ್ತು. ಆಯ್ಕೆಯಾಗಿರುವ ಕಂಪನಿಗಳು ವಾಹನಗಳಿಗೆ ಎಐಎಸ್ 140 ಪ್ರಮಾಣೀಕೃತ ವೆಹಿಕಲ್ ಲೋಕೇಷನ್ ಟ್ರಾ್ಯಕಿಂಗ್ ಡಿವೈಸ್ ಅಳವಡಿಸಲಿದೆ. ಈ ಯೋಜನೆ ತ್ವರಿತವಾಗಿ ಜಾರಿಯಾಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣವಾಗಲಿದೆ.
ಬೆಲೆ ಎಷ್ಟು?ವಿಎಲ್​ಟಿ ವಿತ್ ಪ್ಯಾನಿಕ್ ಬಟನ್ ಬೆಲೆ 7,599 ರೂ. (ಜಿಎಸ್​ಟಿ ಹೊರತು)
ಯಾವ ವಾಹನ?ಯೆಲ್ಲೋ ಬೋರ್ಡ್​ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಅನ್ವಯ.
ವಿಎಲ್​ಟಿ ಮತ್ತು ಪ್ಯಾನಿಕ್ ಬಟನ್ ಈಗಾಗಲೇ ಅಳವಡಿಕೆ ಮಾಡಿರುವ ವಾಹನಗಳಿಗೂ ಮತ್ತೆ ಅಳವಡಿಕೆ ಮಾಡುವಂತೆ ಸೂಚಿಸಿರುವುದು ಸರಿಯಲ್ಲ. ಒಂದೊಮ್ಮೆ ಸಾಧನಗಳನ್ನು ಅಳವಡಿಕೆ ಮಾಡಲೇಬೇಕಾದರೆ ಸರ್ಕಾರ ಆರ್ಥಿಕವಾಗಿ ಸಹಾಯ ಮಾಡಬೇಕು.
| ಕೆ.ರಾಧಾಕೃಷ್ಣ ಹೊಳ್ಳ ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘದ ಅಧ್ಯಕ್ಷ
ಕಾರ್ಯನಿರ್ವಹಣೆ ಹೇಗೆ?
ವಿಎಲ್​ಟಿ ಮಾನಿಟರಿಂಗ್ ನಕ್ಷೆಯಲ್ಲಿ ವಾಹನಗಳ ನೈಜ-ಸಮಯದ ಟ್ರಾ್ಯಕಿಂಗ್ ಮಾಡಲಾಗುತ್ತದೆ. ವಾಹನ ಎಲ್ಲಿದೆ? ಯಾವ ಮಾರ್ಗದಲ್ಲಿ ಪ್ರಯಾಣಿಸುತ್ತಿದೆ. ಮಾರ್ಗ ಬದಲಾವಣೆ ಸೇರಿ ಎಲ್ಲ ಮಾಹಿತಿ ಲಭ್ಯವಾಗಲಿದೆ. ಅತಿವೇಗ, ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ಎಚ್ಚರಿಕೆ ಕೊಡಲಿದೆ. ವಾಹನದಲ್ಲಿ ಪ್ರಯಾಣಿಸುವ ತುರ್ತು ಪರಿಸ್ಥಿತಿ ಎದುರಾದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಕಮಾಂಡ್ ಸೆಂಟರ್ ತಕ್ಷಣ ಸ್ಪಂದಸಲಿದ್ದು, ಸ್ಥಳೀಯ ಪೊಲೀಸರಿಗೆ ತಿಳಿಸಿ, ನೆರವಿಗೆ ಧಾವಿಸುವಂತೆ ಸೂಚಿಸಬಹುದು.
ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಧ್ವನಿ ಎನ್ನಲಾದ ಇನ್‌ಸ್ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 2 =
Remember me
