ಉಡುಪಿ:ಪಡುಬಿದ್ರಿ ಕಡಲ್ಕೊರೆತ ವೀಕ್ಷಿಸಲು ಹೋಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಲೆಗಳ ಅಬ್ಬರಕ್ಕೆ ಬೆದರಿ ದೇಹದ ಮೇಲೆ ಅರೆಕ್ಷಣ ನಿಯಂತ್ರಣ ಕಳೆದುಕೊಂಡ ಘಟನೆ ಮಂಗಳವಾರ ಸಂಭವಿಸಿತ್ತು.
ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವರು ಪಡುಬಿದ್ರಿ ಕಡಲ್ಕೊರೆತ ಪ್ರದೇಶದಲ್ಲಿ ಸಮುದ್ರಕ್ಕಿಳಿದಿದ್ದರು. ಕಡಲ್ಕೊರೆತ ವೀಕ್ಷಣೆ ಮಾಡುತ್ತ ಸಮುದ್ರ ನೀರಿನ ಬಳಿ ಸಾಗಿದ ಸಚಿವರು ಅಲೆಗಳ ಅಬ್ಬರ ಕಂಡು ಒಂದು ಕ್ಷಣ ಹೆದರಿ ಹಿಂದಕ್ಕೆ ಸರಿದಾಗ ದೇಹದ ಮೇಲೆ ನಿಯಂತ್ರಣ ಕಳೆದುಕೊಂಡರು. ಜತೆಗಿದ್ದವರು ಹಿಡಿದ ಕಾರಣ ಸಚಿವರು ಅಪಾಯದಿಂದ ಪಾರಾದರು.
ಇದನ್ನೂ ಓದಿರಿಹಸುಗೂಸನ್ನು ಬಾಳೆಎಲೆಯಲ್ಲಿ ಸುತ್ತಿ ಹೋಟೆಲ್​ನ ಕಸದ ತೊಟ್ಟಿಯಲ್ಲಿ ಎಸೆದರು!
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮಳೆ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಕಡಲ್ಕೊರೆತ ಸಹಿತ ಪ್ರಕೃತಿ ವಿಕೋಪಕ್ಕೆ ಸ್ಪಂದಿಸಲು ಎನ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ದಳದ ನಾಲ್ಕು ತಂಡ ಕಾರ್ಯನಿರ್ವಹಿಸುತ್ತಿದೆ ಎಂದರು. ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್​ ಉಪಸ್ಥಿತರಿದ್ದರು.
ಹಿಂದು ದೇಗುಲದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟು ಅರ್ಚಕನಿಂದ ಪೂಜೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 8 =
Remember me
