ಬೀದರ್​:ಜೆಡಿಎಸ್​ ಪಂಚರತ್ನ ರಥಯಾತ್ರೆಯ 2ನೇ ಹಂತದ ಯಾತ್ರೆಗೆ ಗಡಿ ಜಿಲ್ಲೆ ಬೀದರ್​ನಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.
ಬೀದರ್ ನಗರದ ಶ್ರೀ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢ ಶ್ರೀಗಳ ಗದ್ದುಗೆಗೆ ಪೂಜೆ ನೆರವೇರಿಸಿ 2ನೇ ಹಂತದ ಯಾತ್ರೆಯನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರಂಭಿಸಿದರು. ಶಾಸಕ ಬಂಡೆಪ್ಪ ಖಾಶೆಂಪುರ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪುರ ಇತರರಿದ್ದರು.
ಬೀದರ್​ ಜಿಲ್ಲೆಯಲ್ಲಿ ನಾಲ್ಕು ದಿನ ಯಾತ್ರೆ ಸಂಚರಿಸಲಿದ್ದು, ಜಿಲ್ಲೆಯ 6ರ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ತಲಾ ಒಂದೊಂದು ದಿನ ಯಾತ್ರೆ ನಡೆಸಿ, ಕುಮಾರಸ್ವಾಮಿ ವಾಸ್ತವ್ಯ ಮಾಡಲಿದ್ದಾರೆ. ಜ.5ರಂದು ಬೀದರ್ ಉತ್ತರ, 6ರಂದು ಬೀದರ್ ದಕ್ಷಿಣ, 7ಕ್ಕೆ ಹುಮನಾಬಾದ್ ಹಾಗೂ 8ರಂದು ಬಸವಕಲ್ಯಾಣ ಕ್ಷೇತ್ರದಲ್ಲಿ ಯಾತ್ರೆ ಸಂಚರಿಸಲಿದೆ.
ಬೀದರ್ ಉತ್ತರ, ಬೀದರ್ ದಕ್ಷಿಣ, ಬಸವಕಲ್ಯಾಣ ಹಾಗೂ ಹುಮನಾಬಾದ್ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ನಾಲ್ಕು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಾಸಕ ಬಂಡೆಪ್ಪ ಖಾಶೆಂಪುರ (ಬೀದರ್ ದಕ್ಷಿಣ), ರಮೇಶ ಪಾಟೀಲ್ ಸೋಲಪುರ (ಬೀದರ್ ಉತ್ತರ), ಸಿ.ಎಂ. ಫಯಾಜ್ (ಹುಮನಾಬಾದ್) ಹಾಗೂ ಸೈಯದ್ ಯಸ್ರಬ್ ಅಲಿ ಖಾದ್ರಿ (ಬಸವಕಲ್ಯಾಣ) ಅಭ್ಯರ್ಥಿಯಾಗಿದ್ದಾರೆ. ಔರಾದ್ ಹಾಗೂ ಭಾಲ್ಕಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಬೇಕಿದೆ.
ಮೊದಲ ಹಂತದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ರಾಮನಗರದಲ್ಲಿ ಜೆಡಿಎಸ್​ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಸಂಚರಿಸಿದೆ.
ಮಂಗಳಮುಖಿಯಾಗಿ ಲಿಂಗಪರಿವರ್ತನೆ ಮಾಡಿಸಿಕೊಂಡ ಬಂಟ್ವಾಳ ಮೂಲದ ಮುಸ್ಲಿಂ ಯುವಕ! ಆಡಿಯೋ ವೈರಲ್​ ಬೆನ್ನಲ್ಲೇ ಆಘಾತಕಾರಿ ವಿಷಯ ಚರ್ಚೆ

18 ಸಾವಿರ ಮಂದಿಯನ್ನ ಕೆಲಸದಿಂದ ವಜಾ ಮಾಡುವುದಾಗಿ ಅಮೆಜಾನ್​ ಘೋಷಣೆ! ಉದ್ಯೋಗಿಗಳಲ್ಲಿ ಆತಂಕ

ಸಂತನೆಂದರೆ ಯಾರು.. ದಿವ್ಯತೆ ಅರಿತವರು… ಸಖತ್​ ವೈರಲ್ ಆಗ್ತಿದೆ ಸಿದ್ದೇಶ್ವರ ಸ್ವಾಮೀಜಿ ಕುರಿತ ಈ ಹಾಡು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + seventeen =
Remember me
