ಬೆಳಗಾವಿ:ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟದ ಕೊನೆಯ ವಿರಾಟ್ ಸಮಾವೇಶ ಗುರುವಾರ ರಾಜ್ಯ ಸರ್ಕಾರದ ಭರವಸೆಯಲ್ಲಿ ಅಂತ್ಯಗೊಂಡಿತು.
ಬೆಳಗಾವಿ ಸುವರ್ಣ ವಿಧಾನಸೌದ ‌ಬಳಿ ರಾಘವೇಂದ್ರ ಬಡಾವಣೆ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಪಂಚಮಸಾಲಿ ವಿರಾಟ್ ಸಮಾವೇಶದಲ್ಲಿ 20 ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದರು.
ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಪಂಚಮಸಾಲಿ ಸಮಾಜ ಹಿಂದುಳಿದಿದ್ದು, ಮೀಸಲಾತಿ ಕೊಡಬಹುದು ಎಂದು ಉಲ್ಲೇಖಿಸಿದ್ದು ಡಿ.28ರಂದು ಸರ್ವ ಪಕ್ಷಗಳ ಸಭೆ ಕರೆದು ಡಿ.29ರಂದು ಸಚಿವ ಸಂಪುಟದಲ್ಲಿ ‌ಚರ್ಚಿಸಿ ಮೀಸಲಾತಿ ಘೋಷಣೆ ‌ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರು ತಾತ್ಕಾಲಿಕವಾಗಿ ಹೋರಾಟ ಕೈ ಬಿಟ್ಟರು.
ಇದೇ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯಲ್ಲಿ ಪಂಚಮಸಾಲಿ ಸಮಾಜ ಹಿಂದುಳಿದಿದ್ದು,‌ ಮೀಸಲಾತಿ ಕೊಡಬಹುದು ಎಂದು ಉಲ್ಲೇಖಿಸಿದೆ. ಸರ್ಕಾರ ಕೂಡ ವರದಿ ಒಪ್ಪಿಕೊಂಡಿದೆ. ಗುರುವಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಮೀಸಲಾತಿ ಘೋಷಣೆ ಮಾಡಲಾಗುವುದು. ಅಲ್ಲದೆ, ಕೇಂದ್ರ ಸರ್ಕಾರದ‌ ಮೀಸಲಾತಿ ಪಟ್ಟಿಯಲ್ಲಿ ಸಮಾಜಕ್ಕೆ ಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
