ಮಂಡ್ಯ:ಮಂಡ್ಯದ ವಿಶ್ವವಿದ್ಯಾಲಯದ ಮೈದಾನದಲ್ಲಿ ಇಂದು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯ ಜೀವನೋಪಾಯ ವರ್ಷದ ಉದ್ಘಾಟನೆ ಮತ್ತು ಸಾಮರ್ಥ್ಯ ಮಳಿಗೆ ಲೋಕಾರ್ಪಣೆ ಕಾರ್ಯಕ್ರಮ ಸುಮಾರು ಎರಡು ಗಂಟೆ ತಡವಾಗಿ ಆರಂಭಗೊಂಡಿತು.
ಅಷ್ಟು ಮಾತ್ರವಲ್ಲದೆ ಸಚಿವರು ಸುದೀರ್ಘ ಭಾಷಣ ಮಾಡಿದ್ದರಿಂದ ಬೇಸತ್ತ ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುತ್ತಿದ್ದಂತೆ ಜಾಗ ಖಾಲಿ ಮಾಡಿ ತೆರಳಲಾರಂಭಿಸಿದರು. ಅದಾಗ್ಯೂ ಸಿಎಂ ಬೊಮ್ಮಾಯಿ ಜನರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಆರಂಭವಾಗಿತ್ತು. ಅದಾಗ್ಯೂ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಸುದೀರ್ಘ ಭಾಷಣ ಮಾಡಿ ಸರ್ಕಾರದ ಯೋಜನೆಗಳು ಮತ್ತು ಮುಖ್ಯಮಂತ್ರಿಯವರ ಗುಣಗಾನ ಮಾಡಿದರು. ಅಷ್ಟರಲ್ಲೇ ಶೇ. 80 ಮಂದಿ ಜಾಗ ಖಾಲಿ ಮಾಡಿದ್ದರು. ನಂತರ ಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿದ್ದಂತೆ ಉಳಿದ ಜನರೂ ತೆರಳಲಾರಂಭಿಸಿದರು.
ಬಳಿಕ ಭಾಷಣ ಆರಂಭಿಸಿದ ಸಿಎಂ, ಜನರು ಹೊರಟಿದ್ದನ್ನು ಸಮರ್ಥಿಕೊಂಡದ್ದಲ್ಲದೆ, ಆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮನೆಗೆಲಸ, ಹಾಲು ಕರೆಯುವ ಹೊತ್ತಾಯ್ತು ಅಂತ ತಾಯಂದಿರು ಹೊರಟಿದ್ದಾರೆ. ಬೆಳಗಿನಂದಲೂ ಕಾದು ಕೆಲಸಕ್ಕೆ ಹೊತ್ತಾದ ಕೂಡಲೇ ಹೊರಟಿದ್ದಾರೆ. ಅವರ ಸಮಯ ಪ್ರಜ್ಞೆಗೆ ಅಭಿನಂದನೆ ಎಂದು ಹೇಳುವ ಮೂಲಕ ಜನರು ಹೊರಟು ಹೋಗುತ್ತಿರುವುದಕ್ಕೆ ಸಿಎಂ ಸಮಜಾಯಿಷಿ ನೀಡಿದರು.
Fact Check: ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ?; ಇಲ್ಲಿದೆ ಸತ್ಯಾಂಶ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 20 =
Remember me
