ಧಾರವಾಡ:ಮನೆಹಾನಿ ಪರಿಹಾರ ಆಯ್ಕೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ. ಅಧಿಕಾರಿಗಳ ನಡೆಗೆ ಮನನೊಂದ ವ್ಯಕ್ತಿ ನೇಣು ಹಾಕಿಕೊಂಡಿದ್ದಾರೆ.
ಧಾರವಾಡ ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ಭೀಮಪ್ಪ ಪಾಟೀಲ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಇವರ ಮನೆ ಬಿದ್ದು ಹಾನಿಗೊಳಗಾಗಿತ್ತು.
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ್ದಾಗ ಹಾನಿಗೆ ಸಂಬಂಧಿಸಿದಂತೆ ಮನೆಯನ್ನು ಬಿ ಕೆಟಗರಿಗೆ ಸೇರಿಸಲಾಗಿತ್ತು. ಆದರೆ ನಿನ್ನೆ ಅಧಿಕಾರಿಗಳು ಇದ್ದಕ್ಕಿದ್ದಂತೆ ಅದನ್ನು ಸಿ ಕೆಟಗರಿಗೆ ಸೇರಿಸಿದ್ದರು. ಇದರಿಂದ ಮನನೊಂದ ಭೀಮಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡು ಜಿಲ್ಲಾಸ್ಪತ್ರೆಯ ಶವಾಗಾರದ ಎದುರು ಪ್ರತಿಭಟನೆ ನಡೆಸಿದ್ದರು. ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಸಂತೋಷ ಹಿರೇಮಠ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಂಡರು. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?

ರಕ್ತದ ಬದಲು ಮೂಸಂಬಿ ಜ್ಯೂಸ್​ ಕೊಟ್ಟು ರೋಗಿ ಸಾವು ಪ್ರಕರಣ; ಬಯಲಾಯ್ತು ಅಸಲಿ ಕಾರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 4 =
Remember me
