ಬೆಂಗಳೂರು: ಬೇಗೂರಿನ ವಿಶ್ವಪ್ರಿಯ ಲೇಔಟ್​ನಲ್ಲಿ ವಿದ್ಯಾರ್ಥಿ, ಯುವಜನರಿಗೆ ಗಾಂಜಾ ಮಾರಾಟ ಮಾಡ್ತಾ ಇದ್ದ ಮೂವರನ್ನು ಬಂಧಿಸಿರುವುದಾಗಿ ಬೇಗೂರು ಪೊಲೀಸರು ತಿಳಿಸಿದ್ದಾರೆ. ಬೇಗೂರಿನ ವಿಶ್ವಪ್ರಿಯ ಲೇಔಟ್​ನ ಮುನೇಶ್ವರ ದೇವಸ್ಥಾನದ ಹಿಂಭಾಗದ ಕಾಂಪೌಂಡ್​ನಲ್ಲಿ ಇವರು ಆಗಸ್ಟ್ 27ರಂದು ಮಧ್ಯಾಹ್ನ 3 ಗಂಟೆಗೆ ಗಾಂಜಾ ಮಾರುತ್ತಿದ್ದಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರನ್ನು ವಿಶ್ವಪ್ರಿಯ ಲೇಔಟ್​ನ 11ನೇ ಕ್ರಾಸ್ ನಿವಾಸಿಗಳಾದ ಮೊಹಮ್ಮದ್ ಆಲಂಗೀರ್​ ಬಿನ್ ಮೊಹಮ್ಮದ್​ ನೂರುಲ್​ ಹಕ್​ (44), ಮೊಹಮ್ಮದ್ ರಿಪುನ್​ ಬಿನ್ ಮೊಶಾರೀರ್ಫ್ (33), ಮೋಹರ್ ಅಲಿ ಮೊಂಡಲ್ ಬಿನ್​ ಸುಬೀದ್ ಮೊಂಡಲ್​ (23) ಎಂದು ಗುರುತಿಸಲಾಗಿದೆ. ಅವರಿಂದ 4.4 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಕೊಳ್ಳಲಾಗಿದೆ.
ಇದನ್ನೂ ಓದಿ:ಐವರು ನಕ್ಸಲರ ಬಂಧನ, ಜೈಲ್ಲಿನಲ್ಲಿದ್ದ ನಕ್ಸಲ್ ಒಬ್ಬನ ಸಾವು
ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದರು. ಬಂಧಿತ ಆರೋಪಿಗಳೆಲ್ಲರೂ ಪಶ್ಚಿಮ ಬಂಗಾಳದವರು. ಅಲ್ಲಿಂದ ಗಾಂಜಾ ಖರೀದಿಸಿ ರೈಲಿನಲ್ಲಿ ಬೆಂಗಳೂರಿಗೆ ತಂದು ವಿವಿಧ ಮಾರಾಟ ಮಾಡಿ ಅಕ್ರಮ ವಾಗಿ ಹಣ ಸಂಪಾದನೆ ಮಾಡುತ್ತಿದ್ದರು. ದಾಳಿ ನಡೆದ ಸಂದರ್ಭದಲ್ಲಿ ಅವರ ಬಳಿ 11 ಕಿಲೋ ಗಾಂಜಾ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಉಗ್ರಪೀಡಿತ ಶ್ರೀನಗರ ಸೆಕ್ಟರ್​ನಲ್ಲಿ ಸಿಆರ್​ಪಿಎಫ್​ಗೆ ಮಹಿಳಾ ಐಪಿಎಸ್ ನೇತೃತ್ವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 12 =
Remember me
