ಶಿವಮೊಗ್ಗ:ಸಾಗರ ತಾಲೂಕಿನಲ್ಲಿ ವೃದ್ಧ ಜೋಡಿ ಬರ್ಬರವಾಗಿ ಕೊಲೆಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಡಬಲ್​ ಮರ್ಡರ್​ ಆಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಭಾನುವಾರ ಬೆಳ್ಳಂಬೆಳಗ್ಗೆ ಹಳೇ ಇಕ್ಕೇರಿ ಗ್ರಾಮದ ಕಸಕಸೆಕೊಡ್ಲುವಿನ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಂಗಾರಮ್ಮ (62) ಮತ್ತು ಇವರ ಪುತ್ರ ಪ್ರವೀಣ್ (32) ಕೊಲೆಯಾದ ದುರ್ದೈವಿಗಳು.
ತಾಯಿ-ಮಗನನ್ನು ದುಷ್ಕರ್ಮಿಗಳು ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪ್ರವೀಣ್​ ಪತ್ನಿ ರೋಹಿಣಿ ಹಾಗೂ 10 ತಿಂಗಳ ಮಗುವಿನ ಮುಂದೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿದ್ದ ಹಣ ಮತ್ತು ಮೊಬೈಲ್ ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಸಣ್ಣಪುಟ್ಟ ಜಮೀನು ಹೊಂದಿರುವ ಇವರ ಕೊಲೆಗೆ ಬಲವಾದ ಕಾರಣವೇನು? ಎಂಬುದು ತನಿಖೆಯಲ್ಲಿ ಬಯಲಾಗಬೇಕಿದೆ. ಕೆಲ ದಿನಗಳ ಹಿಂದಷ್ಟೇ ಕರೂರಿನಲ್ಲಿ ನಡೆದ ವೃದ್ಧರಿಬ್ಬರ ಕೊಲೆ ರಹಸ್ಯ ಇನ್ನೂ ಬಯಲಾಗಿಲ್ಲ. ಇದೀಗ ಕಸಕಸೆಕೊಡ್ಲುವಿನ ತಾಯಿ-ಮಗನ ಕೊಲೆ ಮಲೆನಾಡಿಗರನ್ನ ಬೆಚ್ಚಿಬೀಳಿಸಿದೆ.
ಸ್ಥಳಕ್ಕೆ ಎಸ್.ಪಿ. ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಬಸ್​ನಲ್ಲಿ ಒಂಟಿ ಮಹಿಳೆ ಪಕ್ಕದಲ್ಲಿ ಕೂರ್ತಾರೆ… ಕ್ಷಣಾರ್ಧದಲ್ಲಿ ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆಗ್ತಾರೆ ಹುಷಾರ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
