ಉಡುಪಿ:ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಜು.28ರಂದು ನಡೆದ ಫಾಜಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್‌ ಕುಮಾರ್‌ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಆದೇಶ ಹೊರಡಿಸಿದ ಬೆನ್ನಿಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವೊಂದು ಸಿಕ್ಕಿದೆ.
ಪ್ರಕರಣ ಸಂಬಂಧ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಕೊಲೆಯಾದ ಫಾಜಿಲ್‌ ಕುಟುಂಬಸ್ಥರು ಪೊಲೀಸ್‌ ಕಮೀಷನರ್‌ಗೆ ನೀಡಿದ್ದ ಲಿಖಿತ ಮನವಿ ಮೇರೆಗೆ ಎಸಿಪಿ ಮಹೇಶ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ.
ಫಾಜಿಲ್ ಹತ್ಯೆಗೆ ಬಳಸಿದ್ದ ಕಾರೊಂದು ಈ ಮಧ್ಯೆ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಪತ್ತೆಯಾಗಿದೆ. ಪಡುಬಿದ್ರಿ ಠಾಣೆ ವ್ಯಾಪ್ತಿಯ ಕಾಜರಕಟ್ಟೆಯ ನಿರ್ಜನ ಪ್ರದೇಶದಲ್ಲಿ ಈ ಕಾರು ಪತ್ತೆಯಾಗಿದ್ದು, ಇದರೊಳಗೆ ಒಂದು ಸಿಮ್​ ಕೂಡ ಕಂಡುಬಂದಿದೆ. ಬಹುಶಃ ಲೊಕೇಷನ್ ಸುಳಿವು ತಪ್ಪಿಸಲು ಅವರು ಈ ಸಿಮ್ ಬಿಟ್ಟುಹೋಗಿರಬಹುದು ಎಂದು ಅಂದಾಜಿಸಲಾಗಿದೆ.
ಪತ್ತೆಯಾಗಿರು ಕಾರಿನ ಹಿಂಬದಿಯ ಸೀಟ್​ನಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ನೀರಿನ ಬಾಟಲಿ ಮತ್ತು ಚಿಲ್ಲರೆ ಹಣ ಕೂಡ ಸಿಕ್ಕಿದೆ. ಹಂತಕರು ಕೃತ್ಯಕ್ಕೆ ಬಳಸಿದ್ದ ಈ ಕಾರನ್ನು ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಟೋಲ್​ ಗೇಟ್ ತಪ್ಪಿಸಿಕೊಂಡು ಬಂದಿದ್ದರೇ ಎಂಬ ಅನುಮಾನವೂ ಮೂಡಿದೆ.
ಅಪಾರ್ಟ್​ಮೆಂಟ್​​ನ 2ನೇ ಮಹಡಿಯಿಂದ ಬಿದ್ದು ಬಾಲಕ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
