ನೆಲಮಂಗಲ:ಶುಕ್ರವಾರ ತಡರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ರೌಡಿಶೀಟರ್​ಗಳಿಗೆ ಎಸ್ಪಿ ರವಿ ಡಿ. ಚನ್ನಣ್ಣನವರ್ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, ಪಾಯಜ಼ನ್ ರಾಮ, ಕಾಸಿಮ್, ಶರವಣ, ಚೇಣಿ, ನಾಗರಾಜ, ರವಿ, ನಿಂಗೇಗೌಡ, ಹರೀಶ, ಮಹದೇವ ಸೇರಿದಂತೆ ಹಲವು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್ ಅದೇಶದ ಮೇರೆಗೆ ನೆಲಮಂಗಲ ಉಪವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿರಿದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ
ಇತ್ತೀಚೆಗೆ ನೆಲಮಂಗಲ ಉಪವಿಭಾಗದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಗುಂಪುಗಾರಿಕೆ, ಬಡ್ಡಿ ದಂಧೆ, ಇಸ್ಪೀಟು ಅಡ್ಡೆಗಳಲ್ಲಿ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಹಾಳು ಮಾಡುವ ಕೃತ್ಯಗಳಲ್ಲಿ ರೌಡಿಶೀಟರ್​ಗಳು ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಇಂದು(ಶನಿವಾರ) ಬೆಳಗ್ಗೆ 100ಕ್ಕೂ ಹೆಚ್ಚು ರೌಡಿಶೀಟರ್​ಗಳಿಗೆ ಪರೇಡ್​ ನಡೆಸಿದ ರವಿ ಡಿ. ಚನ್ನಣ್ಣನವರ್, ಇನ್ಮುಂದೆ ಯಾವುದೇ ಅಪರಾಧ ಕೃತ್ಯಗಳು, ದರೋಡೆ, ಸುಲಿಗೆ, ಕಿಡ್ನ್ಯಾಪ್ ಕೇಸ್ ಗಳಲ್ಲಿ ಭಾಗಿಯಾದರೆ ಗೂಂಡ ಕಾಯ್ದೆಯಡಿ ಗಡಿಪಾರು ಮಾಡುವುದಾಗಿ ಎಚ್ಚರಿಸಿದ್ದಾರೆ.
ರೌಡಿಗಳ ಪರೇಡ್​ನಲ್ಲಿ ನೆಲಮಂಗಲ ಉಪವಿಬಾಗ ಡಿವೈಎಸ್ಪಿ ಮೋಹನ್ ಕುಮಾರ್, ‌ ವೃತ್ತ ನಿರೀಕ್ಷಕರಾದ ಶಿವಣ್ಣ, ಸತ್ಯನಾರಯಣ ಮತ್ತು ಪೊಲೀಸ್​ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ವಿದೇಶಿಗರಿದ್ದ 35 ಮನೆಗಳ ಮೇಲೆ ರಾತ್ರೋರಾತ್ರಿ ಸಿಸಿಬಿ ರೇಡ್​… ಬೆಚ್ಚಿ ಬೀಳಿಸುತ್ತೆ ಅಲ್ಲಿನ ಅಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
