ಬೆಂಗಳೂರು:ನಕಲಿ ಖಾತೆ ಸೃಷ್ಟಿಸಿದ ಕಿಡಿಗೇಡಿಯೊಬ್ಬ ಅಶ್ವಿನಿ ಪುನೀತ್‌ರಾಜಕುಮಾರ್‌  ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ಅಲ್ಲದೆ ಇಂದು ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಪೋಸ್ಟ್ ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್‌ರಾಜಕುಮಾರ್‌ ಕಾರಣ ಎಂದು ದೂರಲಾಗಿದೆ. ಗಜಪಡೆ ಎಂಬ ಪೇಜ್ ಸೃಷ್ಟಿಸಿ ಅದರಲ್ಲಿ, ಅಶ್ವಿನಿ ಪುನೀತ್‌ರಾಜಕುಮಾರ್‌ ಅವರು ಆರ್‌ಸಿಬಿ ಸೋಲಿಗೆ ಕಾರಣ ಎಂದು ಹೇಳಲಾಗಿದೆ.
‘ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಅದನ್ನು ಬಿಟ್ಟು ಗಂಡ ಇಲ್ಲದವರನ್ನು ಕರೆದಿದ್ದಾರೆ. ಇದು ಆರ್‌ಸಿಬಿ ಸೋಲಿಗೆ ಕಾರಣ’ ಎಂದು ಪೇಜ್‌ನಲ್ಲಿ ಬರೆದಿದ್ದಾರೆ. ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪವರ್‌ ಸ್ಟಾರ್ ಅಪ್ಪು ಫ್ಯಾನ್ಸ್ ರೊಚ್ಚಿಗೆದ್ದಿದ್ದಾರೆ.
ಪುನೀತ್‌ರಾಜಕುಮಾರ್ ಅವರು ಇಲ್ಲದೇ ಇದ್ದಾಗ ಇಂತಹ ಅವಮಾನಗಳು ಹೆಚ್ಚಾಗಿವೆ. ಇದಕ್ಕೆ ಸಂಪೂರ್ಣವಾಗಿ ಕಡಿವಾಣ ಬೀಳಬೇಕು ಎಂದು ಅಪ್ಪು ಫ್ಯಾನ್ಸ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಇತ್ತೀಚೆಗಷ್ಟೇ ಐಪಿಎಲ್ ಶುರುವಾಗಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಇದ್ದ ಹೆಸರನ್ನು ಬದಲಾವಣೆ ಮಾಡಲು, ಆರ್’ಸಿಬಿ ಅನ್ ಬಾಕ್ಸ್  ಇವೆಂಟ್ ಆಯೋಜನೆ ಮಾಡಿತ್ತು. ಕಾರ್ಯಕ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಹೆಸರನ್ನು ಬದಲಿಸಲಾಗಿತ್ತು. ಇದಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಹ ಅತಿಥಿಯಾಗಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ ಕಿಡಿಗೇಡಿ. ಸದ್ಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಕ್ಸ್ ಖಾತೆಯಿಂದ ಅದನ್ನು ಡಿಲೀಟ್ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eighteen =
Remember me
