ಬೆಂಗಳೂರು:ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಏರುಪೇರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 ಮತ್ತು 10 ರಂದು ನಡೆಯಲಿರುವ ಸಮ್ಮೇಳನ ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಕೋಟ್ಯಾಂತರ ಭಕ್ತಾದಿಗಳ ಪ್ರಾರ್ಥನೆಯಿಂದ ನಡೆದಾಡುವ ದೇವರು ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸುಧಾರಿಸುತ್ತದೆ ಎನ್ನುವ ನಮ್ಮೆಲ್ಲರ ನಿರೀಕ್ಷೆ ಫಲಿಸುತ್ತಿಲ್ಲ. ಶ್ರೀಗಳ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವುದು ಆತಂಕ ಮತ್ತು ಕಳವಳಕಾರಿಯಾಗಿದೆ.
ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಮ್ಮೇಳನವನ್ನು ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ವಿನಂತಿಸಿಕೊಂಡಿದೆ. ವಿಜಯಪುರ ಜಿಲ್ಲಾಡಳಿತ ಮತ್ತು ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಅಭಿಪ್ರಾಯವೂ ಇದೇ ಆಗಿದೆ. ಈ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ.
ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಸಮ್ಮೇಳನದ ಮುಂದಿನ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದು ಪತ್ರಕರ್ತರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಜ.9ಕ್ಕೆ ಕೆಯುಡಬ್ಲ್ಯೂಜೆ ಸಭೆ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಸರ್ವ ಸದಸ್ಯರ ಸಭೆಗಳು ಮಾತ್ರ ಈಗಾಗಲೇ ನಿಗಧಿಯಾಗಿರುವಂತೆ ದಿನಾಂಕ 9.1.2023 ರಂದು ಸೋಮವಾರ (ವಿಜಯಪುರ ಬದಲಿಗೆ) ಹಾಸನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
(ದಿನಾಂಕ ಮತ್ತು ಸಮಯದಲ್ಲಿ ಬದಲಾವಣೆ ಇರುವುದಿಲ್ಲ. ಸ್ಥಳ ಮಾತ್ರ ಬದಲಾವಣೆ ಆಗಿದೆ)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 7 =
Remember me
