ಬೆಂಗಳೂರು:ಮುಂದಿನ ಎರಡು ವರ್ಷಗಳವರೆಗೆ ಸಿಬಿಐನ ನಿರ್ದೇಶಕರಾಗಿ ಆಯ್ಕೆ ಆಗಿರುವ ಪ್ರಸ್ತುತ ಡಿಜಿ, ಐಜಿಪಿ ಪ್ರವೀಣ್ ಸೂದ್ ಇಂದು ಟ್ವೀಟ್ ಮಾಡಿದ್ದು ತಮ್ಮ ಅಧಿಕಾರವನ್ನು ಹೊಸಬರಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
ತಮ್ಮ ಟ್ವೀಟ್​ನಲ್ಲಿ ಪ್ರವೀಣ್ ಸೂದ್, “ಶೀಘ್ರದಲ್ಲೇ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡುತ್ತೇನೆ. ಡಿಜಿ&ಐಜಿಪಿ ಕರ್ನಾಟಕ ಈ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತೇನೆ. 2020ರಲ್ಲಿ ಈ ಖಾತೆಯ ನಿರ್ವಹಣೆಯನ್ನು ಪ್ರಾರಂಭಿಸಿದ್ದೇನೆ. ಅಧಿಕೃತ ವಿಷಯಗಳ ಬಗ್ಗೆ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. 1.6 ಲಕ್ಷ ಜನ ಈ ಖಾತೆಯನ್ನ ಅನುಸರಿಸುತ್ತಿರೋದು ತುಂಬಾ ಖುಷಿಯಾಗಿದೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲು ಸಿದ್ಧ ಎಂದ ಪ್ರವೀಣ್ ಸೂದ್; ಯಾವಾಗ?
ನಂತರದ ಎರಡು ಟ್ವೀಟ್​ಗಳಲ್ಲಿ ಅವರು, ಕರ್ನಾಟಕ ಪೊಲೀಸರಿಗೆ ಸಂಬಂಧಿಸಿದ ಅಧಿಕೃತ ವಿಷಯಗಳ ಕುರಿತು ನಿಮ್ಮ ಪ್ರತಿಕ್ರಿಯೆಗಳಿಗಾಗಿ ತುಂಬು ಧನ್ಯವಾದಗಳು. ನಾನು ನನ್ನ @Copsview ವೈಯಕ್ತಿಕ ಹ್ಯಾಂಡಲ್ ಅನ್ನು ಬಳಸುವುದನ್ನು ಮುಂದುವರಿಸುತ್ತೇನೆ.HOPF ಆಗಿ ಕಳೆದ 3.5 ವರ್ಷಗಳಲ್ಲಿ ಮತ್ತು ಸಾಮಾನ್ಯವಾಗಿ 37 ವರ್ಷಗಳಲ್ಲಿ ನನಗೆ ತೋರಿದ ಪ್ರೀತಿ ಮತ್ತು ಪ್ರೀತಿಗಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.
ನನ್ನ ಮುಂದಿನ ಅಸೈನ್​ಮೆಂಟ್​ಗಳನ್ನು ಪೂರ್ಣಗೊಳಿಸಿದ ನಂತರ ನಾನು ಕರ್ನಾಟಕಕ್ಕೆ ಮೇ 2025 ರಲ್ಲಿ ಹಿಂತಿರುಗುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಮತ್ತೊಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಮುಂದಿನ ಡಿಜಿ ಹಾಗೂ ಐಜಿಪಿಯಾಗಿ ಯಾರು ಆಯ್ಕೆ ಆಗಲಿದ್ದಾರೆ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದ್ದಾರೆ.
I will soon be handing over charge to my successor and exiting out of this official handle of DG & IGP Karnataka. I started this handle in Feb 2020 after taking charge and connected with all of you on official matters. Glad to note that more than 1.6 lakh people are following it.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − four =
Remember me
