ಬೆಂಗಳೂರು:ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ. ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು.
ದೇಶಾದ್ಯಂತ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ದೆಹಲಿ, ಸಂಸತ್ತಿನಲ್ಲಿ, ರಾಜ್ಯ ಸಭಾ, ಲೋಕಸಭಾ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ನಡೆಯುತ್ತಿದೆ. ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬಹಳಷ್ಟು ಸಹಮತ ಮತ್ತು ಸಂತೋಷ ದೇಶಾದ್ಯಂತ ಮೂಡಿಬಂದಿದೆ.
ಎನ್​ಡಿಎ ಮಿತ್ರ ಪಕ್ಷಗಳಷ್ಟೇ ಅಲ್ಲ ವಿರೋಧ ಪಕ್ಷದ ಲ್ಲಿಯೂ ಮುಕ್ತವಾಗಿ ಬೆಂಬಲ ಸೂಚಿಸಿದ್ದಾರೆ. ದ್ರೌಪದಿ ಮುರ್ಮು ಅವರು ಒಬ್ಬ ದಕ್ಷ ಆಡಳಿತಗಾರರಾಗಿ, ಮುನಿಸಿಪಾಲಿಟಿ ಉಪಾಧ್ಯಕ್ಷೆಯಾಗಿ,ಮಂತ್ರಿ, ಶಾಸಕರು ಮತ್ತು ರಾಜ್ಯಪಾಲರಾಗಿ ಅವರ ಸೇವೆ ಅಮೋಘವಾಗಿದೆ. ಬುಡಕಟ್ಟು ಸಮುದಾಯದಿಂದ ಬಂದವರು, ಉತ್ತಮ ಕೆಲಸ ಮಾಡಿದವರಿಗೆ ಅತ್ಯುನ್ನತ ಸ್ಥಾನ ಲಭಿಸುತ್ತಿದೆ. ಪ್ರಜಾಪ್ರಭುತ್ವದ ಹಿರಿಮೆ ಮತ್ತು ಗರಿಮೆ. ಇಂಥ ಕೆಲಸವನ್ನು ಎನ್​ಡಿಎ ಮುಖ್ಯಸ್ಥರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಯ್ಕೆ ಮಾಡಿ ಇದೀ ದೇಶದಲ್ಲಿ ಒಂದು ಸಂಚಲನ ಹಾಗೂ ಸಂದೇಶವನ್ನು ನೀಡಿದ್ದಾರೆ.
ವಿರೋಧಪಕ್ಷದಲ್ಲಿರುವವರು ನಮ್ಮ ಕರ್ನಾಟಕದ ಜೆಡಿಎಸ್ ಮುಖ್ಯಸ್ಥರು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಜಾರ್ಖಂಡ್ ಮುಕ್ತಿ ಮೋರ್ಚಾ, ವೈ. ಎಸ್.ಆರ್ ಪಕ್ಷ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ ಗೆಲ್ಲುವುದು ನಿಶ್ಚಿತ ಎಂದರು.
ಕಾಂಗ್ರೆಸ್ ನರಳಾಟ:ಕಾಂಗ್ರೆಸ್ ಸೋಲಿನ ಭೀತಿಯಿಂದ ನರಳುತ್ತಿದೆ. ಕೆಳಮಟ್ಟದ ರಾಜಕೀಯವನ್ನು ಎಲ್ಲೆಡೆ ಮಾಡುತ್ತಿದೆ ಎಂದು ಸಿಎಂ ಬೊಮ್ಮಾಯಿ‌ ವಾಗ್ದಾಳಿ ಮಾಡಿದರು. ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಜೆಡಿಎಸ್ ಮುಖ್ಯಸ್ಥರು ಬೆಂಬಲ ವ್ಯಕ್ತಪಡಿದ್ದಾರೆ. ಕೆಲವು ವಿಚಾರಗಳಲ್ಲಿಯಾದರೂ ಕಾಂಗ್ರೆಸ್ ಒಳ್ಳೆಯ ತತ್ವಗಳನ್ನು ಪಾಲಿಸಬೇಕು. ರಾಷ್ಟ್ರೀಯ ಒಗ್ಗಟ್ಟಿನ ತತ್ವವನ್ನು ಪಾಲಿಸಬೇಕು ಎಂದರು.
ಸೇತುವೆಯಿಂದ ಏಕಾಏಕಿ ನದಿಗೆ ಉರುಳಿತು ಬಸ್​: 13 ಜನರ ಸಾವು

ಇದ್ದಕ್ಕಿದ್ದಂತೆ ಬೆಟ್ಟದಲ್ಲಿದ್ದ ಮರಗಳು ಮಾಯ! ಕೂಗಳತೆ ದೂರದಲ್ಲೇ ಇದೆ ಅರಣ್ಯ ಇಲಾಖೆ ಕಚೇರಿ

Sign in to your account
Please enter an answer in digits:2 × 2 =
Remember me
