ಮೈಸೂರು:ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಪ್ರೊ. ಕೆ.ಎಸ್. ಭಗವಾನ್, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಮಾತನಾಡಿದ ಭಗವಾನ್​, ”ಹಿಂದು ಧರ್ಮ’ ಎಂಬುದು ಧರ್ಮವೇ ಅಲ್ಲ. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಹಿಂದು ಎಂದರೆ ಬ್ರಾಹ್ಮಣರು, ಉಳಿದವರೆಲ್ಲ ಶೂದ್ರರು” ಎಂದು ಹೇಳಿದರು. ಶೂದ್ರರು ಎಂದರೆ ಮನುಸ್ಮೃತಿಯಲ್ಲಿ ವೇಶ್ಯೆಯರು ಎಂಬುದಾಗಿ ಉಲ್ಲೇಖವಾಗಿದೆ ಎಂದರು.
ಗ್ರಾಮೀಣರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ಅವರನ್ನು ನೀವು ಯಾವ ಧರ್ಮ ಎಂದರೆ ವಕ್ಕಲಿಗ.. ಕುರುಬ… ಎಂದು ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹೀಗಾಗಿ ಹಿಂದು‌ ಪದವನ್ನ ತೆಗೆದು ಹಾಕಬೇಕು ಎಂದು ಮಾತಿನ ಮೂಲಕವೇ ವಿವಾದದ ಕಿಡಿ ಹೊತ್ತಿಸಿದರು.
ಪರ್ಶಿಯನ್ನರು ಸಿಂಧು ಪದವನ್ನು ಹಿಂದು ಅಂತ ಕರೆದರು. ಅವರು ಬಳಸಿದ ಪದವನ್ನೇ ನಿಮ್ಮ ಧರ್ಮದ ಹೆಸರಿಗೆ ಬಳಸಿಕೊಂಡಿದ್ದೀರಾ…. ಆ ಪದ ಬಿಟ್ಟು ನಿಮಗೆ ಬೇರೆ ಹುಡುಕಲು ಆಗಿಲ್ವ? ಎಂದು ಪ್ರಶ್ನಿಸಿದರು.
ಅ.15ರ ಬೆಳಗ್ಗೆ 11ಕ್ಕೆ ಮಹಿಷ ದಸರಾ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ಹಾಗೂ ಅಹಿಂದ ಪ್ರಗತಿಪರ ಸಂಘಟನೆ ಸಜ್ಜಾಗಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಮೇಯರ್ ಪುರುಷೋತ್ತಮ್, ಮಹಿಷ ದಸರಾಗೆ ಡಿಸಿ ಅವರಿಂದ ಅನುಮತಿ ಸಿಗದಿದ್ದರೂ ನಾವು ಆಚರಣೆ ಮಾಡಿಯೇ ತೀರುತ್ತೇವೆ. ಸರಳವಾಗಿ ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲು ಸಮಿತಿ‌ ತೀರ್ಮಾನಿಸಿದೆ. ಮುಂದಿನ ಬಾರಿ ಕೋರ್ಟ್ ಮೂಲಕ ಅನುಮತಿ ಪಡೆದು ಆಚರಿಸುತ್ತೇವೆ ಎಂದರು.
ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಪದೇಪದೆ ಈ ಗುಲಾಬಿಯೇ ಅಧ್ಯಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 6 =
Remember me
