ಮೈಸೂರು:ಚಾಮುಂಡಿ ಬೆಟ್ಟದ ದೇವಾಲಯವನ್ನು ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತಿದೆ. ಆದರೆ ಅದು ಮಹಾರಾಜರಿಗೆ ಸೇರಿದ್ದು. ಚಾಮುಂಡಿ ಬೆಟ್ಟದ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಯಾವ ರೀತಿ ಮಾಡಿದೆ ಎಂಬುದನ್ನು ನೋಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಇದನ್ನೂ ಓದಿ:ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಹಂಚಿದ ಯುವಕ!
ಇಂದು ಮೈಸೂರು ಖಾಸಗಿ ಹೋಟೆಲ್​ನಲ್ಲಿ ಫಸ್ಟ್​​ ಸರ್ಕಲ್​​​ ಒಕ್ಕಲಿಗ ಉದ್ಯಮಿಗಳ ವಾರ್ಷಿಕ ಸಮ್ಮೇಳನ ಹಾಗೂ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.
ಇದೇ ವೇಳೆ, ತುಂಗಾಭದ್ರಾ ಜಲಾಶಯ ಕ್ರಸ್ಟ್​ ಗೇಟ್ ಕೊಚ್ಚಿ ಹೋಗಿರುವ ವಿಚಾರವಾಗಿ ಮಾತನಾಡಿ,​ “ದುರಸ್ತಿಗೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಹೋಗಿದೆ. ಕೂಡಲೇ ವಿದೇಶಿ ತಜ್ಞರನ್ನು ಕರೆಸಿ ದುರಸ್ತಿ ಮಾಡಿಸಬೇಕು. ವಿದೇಶಿ ತಜ್ಞರು ನೀರಿನೊಳಗಿನಿಂದ ರಿಪೇರಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಸೂಕ್ತ ಕ್ರಮ ವಹಿಸಬೇಕು” ಎಂದು ಹೇಳಿದರು.
“ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಭ್ಯರ್ಥಿ ಯಾರೆಂಬುದೂ ಇನ್ನೂ ನಿರ್ಧಾರವಾಗಿಲ್ಲ” ಎಂದು ಮಾಧ್ಯಮದವರ ಪ್ರ‍ಶ್ನೆಗೆ ಉತ್ತರಿಸಿದರು.
ಮೈಸೂರನ್ನು ಬೃಹತ್‌ ಮಹಾನಗರ ಪಾಲಿಕೆ ಮಾಡಿ: “ಈಗಾಗಲೇ ಮೈಸೂರು ಮಹಾನಗರ ಬೃಹತ್​ ಆಗಿ ಬೆಳೆಯುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಬಡಾವಣೆಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಆದ್ದರಿಂದ ಬೃಹತ್​ ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಸುಮಾರು 2 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ” ಎಂದು ಹೇಳಿದರು.
ಬಿಕಾಂ ಓದುವಾಗಲೇ ‘ಅಪ್ರೆಂಟಿಸ್‌ಶಿಪ್’: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − five =
Remember me
