ಮಡಿಕೇರಿ:ತನ್ನ ಸೊಸೆಯನ್ನು ಕೊಲ್ಲಲ್ಲು ಮಾವನೇ ಗುಂಡಿಕ್ಕಿರುವ ಘಟನೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಬೆಟ್ಟದಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹಸುವನ್ನು ಬಾಣೆಯಲ್ಲಿ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ್ದಂತೆ ಮಾವ- ಸೊಸೆ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರಿಂದ ಕೋಪಗೊಂಡ ಮಾವ ಅಯ್ಯಪ್ಪ ತನ್ನ ಸೊಸೆ ತೀರ್ಥ (36) ಅವರ ಮೇಲೆ ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿದ್ದಾನೆ.
ಮಾವ ಹಾರಿಸಿದ ಬಂದೂಕಿನ ಗುಂಡು ಸೊಸೆಯ ಎದೆಭಾಗ ಹಾಗೂ ತೋಳಿ ತಾಗಿದ್ದು, ಗಾಯವಾಗಿದೆ. ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದ್ದಂತೆ ನನ್ನ ತಂದೆ ಅಯ್ಯಪ್ಪ, ತಾಯಿ ಸೀತಮ್ಮ, ಸಹೋದರಿಯರಾದ ಗುಣ, ಪ್ರತೀಮಾ ಅವರು ನನ್ನ ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದರು. ಇದೇ ವಿಚಾರವಾಗಿ ಗುರುವಾರ ನನ್ನ ಪತ್ನಿ ಮೇಲೆ ಅಯ್ಯಪ್ಪ ಗುಂಡು ಹಾರಿಸಿದ್ದಾರೆ ಎಂದು ತೀರ್ಥರ ಪತಿ ಹೂವಯ್ಯ ಸೋಮವಾರಪೇಟೆ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಿಸಿದ್ದಾರೆ. ಆರೋಪಿ ಅಯ್ಯಪ್ಪ ತಲೆಮರೆಸಿಕೊಂಡಿದ್ದಾರೆ.
ಭೀಮಾತೀರದ ಮಹಾದೇವನ ಕೊಲ್ಲಲು ಬಂದದ್ದು 20 ಜನರ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಗುಂಡಿನ ದಾಳಿ

ಹಾಡಹಗಲೇ ಅಪರಿಚಿತರ ಮನೆಗೆ ನುಗ್ಗಿದ್ದ ಹರೆಯದ ಯುವಕರು ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seven =
Remember me
