
ಬೆಂಗಳೂರು: ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು ಬಿಬಿಎಂಪಿಗೆಗ ಹೋದರೆ ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ವೃದ್ದೆಯೊಬ್ಬರು ಸಿಎಂಗೆ ದೂರಿದ್ದಾರೆ.
ಜನ ಸ್ಪಂದನದಲ್ಲಿ ದೂರು ಆಲಿಸಿದ ಸಿಎಂ, ಅಧಿಕಾರಿಗಳ ವಿರುದ್ಧ ಗರಂ ಆದರು. ಬಿಬಿಎಂಪಿ ಅಧಿಕಾರಿಯನ್ನು ಕರೆದು ಪ್ರಕರಣವನ್ನು ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ರಿಪೋರ್ಟ್ ಮಾಡಿ ಎಂದು ಸೂಚಿಸಿದರು.
ಹಾಗೆಯೇ, ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಿಎಂ ತಾಕೀತು ಮಾಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two − one =
Remember me
