ಬೆಂಗಳೂರು:ರಾಜಧಾನಿ ಬೆಂಗಳೂರಿನ ಅಜೀಮ್​ ಪ್ರೇಮ್​ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕುಸಿದು ಬಿದ್ದು ಸಾವಿಗೀಡಾದ ಪ್ರಸಂಗವೊಂದು ನಡೆದಿದೆ. ಪ್ರಥಮ ವರ್ಷದ ಎಂಎ ಡೆವಲಪ್​ಮೆಂಟ್​​ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಸಾವಿಗೀಡಾದ ವಿದ್ಯಾರ್ಥಿ.
ಇದನ್ನೂ ಓದಿ:140 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದ ಸರ್ಕಾರ; ಬೇಸತ್ತು ವಿಷ ಕುಡಿದಿದ್ದ ಶಿಕ್ಷಕ ಸಾವು, ಇನ್ನೊಬ್ಬರು ತೀವ್ರ ಅಸ್ವಸ್ಥ
ಹಾಸ್ಟೆಲ್ ಹಾಗೂ ಪ್ರಯಾಣದ ಶುಲ್ಕ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿರುವ ಅಜೀಮ್ ಪ್ರೇಮ್​​ಜಿ ಯೂನಿವರ್ಸಿಟಿಯ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಕಳೆದ 12 ದಿನಗಳಿಂದ ಕ್ಯಾಂಪಸ್ ಒಳಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅದಾಗ್ಯೂ ವಿಶ್ವವಿದ್ಯಾಲಯದವರು ಸ್ಪಂದಿಸಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಮುಂದಿನ ಮುಖ್ಯಮಂತ್ರಿ ಯಾರು?; ಇದೊಂದೇ ಪ್ರಶ್ನೆಗೆ ಯುವಕರ ಮಧ್ಯ ಮಾರಾಮಾರಿ, ಕೊಲೆ ಬೆದರಿಕೆ
ಹೀಗಾಗಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿತ್ತು. ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಅಭಿಷೇಕ್ ನಿನ್ನೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ. ಅಭಿಷೇಕ್ ಸಾವಿಗೆ ಅಜೀಮ್ ಪ್ರೇಮ್​ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿ ಮತ್ತು ಅಲಕ್ಷ್ಯ ಕಾರಣ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ಮಹಾರಾಷ್ಟ್ರ ಮೂಲದವನಾಗಿದ್ದು, ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಪ್ರ್ಯಾಕ್ಟಿಸ್​ ಮಾಡುತ್ತಿದ್ದ ಸಂದರ್ಭದಲ್ಲಿ ಸುಸ್ತಾಗಿ ಬಿದ್ದಿದ್ದ. ಕೂಡಲೇ ಆತನನ್ನು ಸರ್ಜಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೇಂಟ್ ಜಾನ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ ಎಂಬುದಾಗಿ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − twelve =
Remember me
